ಭೂಮಿ ಹುಣ್ಣಿಮೆ | ಅನ್ನದಾತರಿಂದ ಹೊಲ ಗದ್ದೆಗಳಲ್ಲಿ ವಿಶೇಷ ಪೂಜೆ |

October 18, 2024
6:50 AM
ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ಭೂಮಿ ಹುಣ್ಣಿಮೆ ನಡೆಯುತ್ತದೆ. 

ಮಲೆನಾಡಿನ ವಿಶೇಷ ಹಬ್ಬವಾದ ಭೂಮಿ ಹುಣ್ಣಿಮೆ, ರೈತಾಪಿ ಜನರ ಸಂಭ್ರಮ, ಸಡಗರದ ಹಬ್ಬವಾಗಿದ್ದು,  ಭೂ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸುತ್ತಾರೆ.

Advertisement
Advertisement
Advertisement
Advertisement

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ರೈತರು ವಿಶೇಷವಾಗಿ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸುತ್ತಾರೆ. ವಿವಿಧ ರೀತಿಯ ತಿಂಡಿ ತಿನಿಸುಗಳನ್ನು ತಯಾರಿಸಿ ಭೂಮಿ ತಾಯಿಗೆ ಅರ್ಪಣೆ ಮಾಡುತ್ತಾರೆ. ಭೂಮಣ್ಣಿ ಬುಟ್ಟಿ ತಯಾರಿಸಿ ಚಿತ್ತಾರ ಬರೆದು ವಿಶಿಷ್ಟ ರೀತಿಯಲ್ಲಿ ಹಬ್ಬ ಆಚರಣೆ ಮಾಡುತ್ತಾರೆ. ಮನೆಯಲ್ಲಿ ತಯಾರಿಸಿದ ಭೋಜನಗಳನ್ನು ಹೊಲಕ್ಕೆ ಸಮರ್ಪಿಸಿ, ನಂತರ ಹೊಲದಲ್ಲೇ ರೈತ ಕುಟುಂಬ ಸಾಮೂಹಿಕ ಊಟ ಮಾಡುತ್ತದೆ.

Advertisement

ವಿಜಯದಶಮಿ ಕಳೆದು ಬರುವ ಹುಣ್ಣಿಮೆಯೇ ಭೂಮಿ ಹುಣ್ಣಿಮೆ. ಮಲೆನಾಡಿನ ರೈತಾಪಿ ವರ್ಗ ಇದನ್ನು ಭೂಮಿ ಹುಣ್ಣಿಮೆ ಎಂದು ಆರಾಧಿಸಿದರೆ, ಬಯಲು ಸೀಮೆಯ ರೈತರು ಸೀಗೆ ಹುಣ್ಣಿಮೆ ಎಂದು ಆಚರಿಸುತ್ತಾರೆ. ಆಯಾ ಜಿಲ್ಲೆಗಳ ನಿಯಮ, ಸಂಪ್ರದಾಯದ ಪ್ರಕಾರ ಈ ಆಚರಣೆ ನಡೆಯುತ್ತದೆ. ಅಂದರೆ ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ನಡೆಯುತ್ತದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |
February 16, 2025
4:50 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |
February 16, 2025
4:46 PM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆ| 14 ದಿನದೊಳಗೆ ರೈತರಿಗೆ ಕಬ್ಬಿನ ಹಣ ಪಾವತಿಸಬೇಕು | ಜಿಲ್ಲಾಧಿಕಾರಿ ಸೂಚನೆ
February 16, 2025
4:41 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror