ಮಲೆನಾಡಿನ ವಿಶೇಷ ಹಬ್ಬವಾದ ಭೂಮಿ ಹುಣ್ಣಿಮೆ, ರೈತಾಪಿ ಜನರ ಸಂಭ್ರಮ, ಸಡಗರದ ಹಬ್ಬವಾಗಿದ್ದು, ಭೂ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸುತ್ತಾರೆ.
ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ರೈತರು ವಿಶೇಷವಾಗಿ ಭೂಮಿ ಹುಣ್ಣಿಮೆ ಹಬ್ಬವನ್ನು ಆಚರಿಸುತ್ತಾರೆ. ವಿವಿಧ ರೀತಿಯ ತಿಂಡಿ ತಿನಿಸುಗಳನ್ನು ತಯಾರಿಸಿ ಭೂಮಿ ತಾಯಿಗೆ ಅರ್ಪಣೆ ಮಾಡುತ್ತಾರೆ. ಭೂಮಣ್ಣಿ ಬುಟ್ಟಿ ತಯಾರಿಸಿ ಚಿತ್ತಾರ ಬರೆದು ವಿಶಿಷ್ಟ ರೀತಿಯಲ್ಲಿ ಹಬ್ಬ ಆಚರಣೆ ಮಾಡುತ್ತಾರೆ. ಮನೆಯಲ್ಲಿ ತಯಾರಿಸಿದ ಭೋಜನಗಳನ್ನು ಹೊಲಕ್ಕೆ ಸಮರ್ಪಿಸಿ, ನಂತರ ಹೊಲದಲ್ಲೇ ರೈತ ಕುಟುಂಬ ಸಾಮೂಹಿಕ ಊಟ ಮಾಡುತ್ತದೆ.
ವಿಜಯದಶಮಿ ಕಳೆದು ಬರುವ ಹುಣ್ಣಿಮೆಯೇ ಭೂಮಿ ಹುಣ್ಣಿಮೆ. ಮಲೆನಾಡಿನ ರೈತಾಪಿ ವರ್ಗ ಇದನ್ನು ಭೂಮಿ ಹುಣ್ಣಿಮೆ ಎಂದು ಆರಾಧಿಸಿದರೆ, ಬಯಲು ಸೀಮೆಯ ರೈತರು ಸೀಗೆ ಹುಣ್ಣಿಮೆ ಎಂದು ಆಚರಿಸುತ್ತಾರೆ. ಆಯಾ ಜಿಲ್ಲೆಗಳ ನಿಯಮ, ಸಂಪ್ರದಾಯದ ಪ್ರಕಾರ ಈ ಆಚರಣೆ ನಡೆಯುತ್ತದೆ. ಅಂದರೆ ಹೊಲದಲ್ಲಿ ಇರುವ ಪೈರನ್ನು ಗರ್ಭವತಿ ಎಂದು ಕಲ್ಪಿಸಿಕೊಂಡು ಈ ವಿಶಿಷ್ಟ ಆಚರಣೆ ನಡೆಯುತ್ತದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…