ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ದೇಶವ್ಯಾಪಿ ಬಂದ್ ಗೆ ಕರೆ ನೀಡಿವೆ.ಬ್ಯಾಂಕ್ ಒಕ್ಕೂಟಗಳು ಮಾ. 28 ಮತ್ತು ಮಾ. 29 ರಂದು ಮುಷ್ಕರಕ್ಕೆ ಕರೆ ನೀಡಿವೆ, ಹೀಗಾಗಿ ಬ್ಯಾಂಕ್ ಸೇವೆಯಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯದಲ್ಲಿ ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಒದಗಿಸಿದ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಬ್ಯಾಂಕ್ ಮಾತ್ರವಲ್ಲ ಅಂಚೆ, ಟೆಲಿಕಾಂ, ವಿಮೆ ಸೇರಿದಂತೆ ಇತರ ಕ್ಷೇತ್ರಗಳೂ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಈ ಕ್ಷೇತ್ರಗಳಲ್ಲೂ ಎರಡು ದಿನಗಳ ಕಾಲ ಸೇವೆಯಲ್ಲಿ ವ್ಯತ್ಯಯವಾಗಬಹುದು. ಮುಷ್ಕರಕ್ಕೆ ಹಿಂದ್ ಮಜ್ದೂರ್ ಸಭಾ , ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…