ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ದೇಶವ್ಯಾಪಿ ಬಂದ್ ಗೆ ಕರೆ ನೀಡಿವೆ.ಬ್ಯಾಂಕ್ ಒಕ್ಕೂಟಗಳು ಮಾ. 28 ಮತ್ತು ಮಾ. 29 ರಂದು ಮುಷ್ಕರಕ್ಕೆ ಕರೆ ನೀಡಿವೆ, ಹೀಗಾಗಿ ಬ್ಯಾಂಕ್ ಸೇವೆಯಲ್ಲಿ ಎರಡು ದಿನಗಳ ಕಾಲ ವ್ಯತ್ಯಯ ಸಾಧ್ಯತೆ ಇದೆ. ರಾಜ್ಯದಲ್ಲಿ ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಒದಗಿಸಿದ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳ ಸೇವೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.
ಬ್ಯಾಂಕ್ ಮಾತ್ರವಲ್ಲ ಅಂಚೆ, ಟೆಲಿಕಾಂ, ವಿಮೆ ಸೇರಿದಂತೆ ಇತರ ಕ್ಷೇತ್ರಗಳೂ ಮುಷ್ಕರಕ್ಕೆ ಕರೆ ನೀಡಿದೆ. ಹೀಗಾಗಿ ಈ ಕ್ಷೇತ್ರಗಳಲ್ಲೂ ಎರಡು ದಿನಗಳ ಕಾಲ ಸೇವೆಯಲ್ಲಿ ವ್ಯತ್ಯಯವಾಗಬಹುದು. ಮುಷ್ಕರಕ್ಕೆ ಹಿಂದ್ ಮಜ್ದೂರ್ ಸಭಾ , ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (CITU), ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC), ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…