Advertisement
MIRROR FOCUS

ಅಡಿಕೆ ಮಾತ್ರವಲ್ಲ ಕಾಳುಮೆಣಸು ಕೂಡಾ ಬರ್ಮಾದಿಂದ ಕಳ್ಳ ಸಾಗಾಣಿಕೆ…! | 300 ಚೀಲ ಕಾಳುಮೆಣಸು ವಶಕ್ಕೆ ಪಡೆದ ಪೊಲೀಸರು | ಅಕ್ರಮ ತಡೆಗೆ ಬಲ ನೀಡಿದ ಕ್ಯಾಂಪ್ಕೋ ಪತ್ರ |

Share

ಅಸ್ಸಾಂ ಮೂಲಕ ಬರ್ಮಾದಿಂದ ಅಡಿಕೆ ಮಾತ್ರವಲ್ಲ ಕಾಳುಮೆಣಸು ಕೂಡಾ ಕಳ್ಳಸಾಗಾಣಿಕೆಯಾಗುತ್ತಿದೆ. ಈಚೆಗೆ ಪೊಲೀಸರು ಬಿಗು ತಪಾಸಣೆ ಮಾಡುವ ವೇಳೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ 13,500 ಕೆಜಿ ಬರ್ಮಾ ಕಾಳುಮೆಣಸನ್ನು ವಶಪಡಿಸಿಕೊಂಡಿದ್ದಾರೆ.

ಅಸ್ಸಾಂ ಪೊಲೀಸರು  ನಾಗಾಲ್ಯಾಂಡ್‌ನ ಗಡಿಯಲ್ಲಿರುವ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಚೆಕ್ ಗೇಟ್‌ನಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಕಾಳುಮೆಣಸು ವಶಪಡಿಸಿಕೊಂಡಿದ್ದಾರೆ. ಕಾಳುಮೆಣಸು ದಿಮಾಪುರ್‌ನಿಂದ ತರಲಾಗುತ್ತಿತ್ತು. ಮೇಘಾಲಯಕ್ಕೆ ಬಂದು ಅಲ್ಲಿಂದ ಉತ್ತರ ಭಾರತಕ್ಕೆ ಕಳ್ಳಸಾಗಾಣೆಯಾಗುತ್ತದೆ ಎಂದು ಪೊಲೀಸರು ತಪಾಸಣೆ ಬಳಿಕ ತಿಳಿಸಿದ್ದಾರೆ. ಈ ಅಕ್ರಮ ಸಾಗಾಟದಲ್ಲಿ  ರಾಜಸ್ಥಾನ ಮೂಲಕ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಹೇಳಿಕೆಯ ಆಧಾರದ ಮೇಲೆ ಪೊಲೀಸರು ನಾಗಾಲ್ಯಾಂಡ್‌ನ ದಿಮಾಪುರದಿಂದ ನಿರ್ಮಲ್‌ಜೀತ್ ಸಿಂಗ್ ಸೇರಿದಂತೆ ಇಬ್ಬರು  ಆರೋಪಿಗಳನ್ನು ಬಂಧಿಸಿದ್ದಾರೆ.

Advertisement
ಬಳಿಕ ಪೊಲೀಸ್ ತಂಡವು ಮೇಘಾಲಯದ ಕೆಲವು ಕಡೆ ಇರುವ ಗೋಡೌನ್‌ನಲ್ಲಿ ದಾಳಿ ನಡೆಸಿದಾಗ  ಮತ್ತೆ100 ಚೀಲ ಕಾಳುಮೆಣಸು ಮತ್ತು 50 ಚೀಲ ಅಡಿಕೆ ವಶಪಡಿಸಿಕೊಂಡಿದೆ.

ಕ್ಯಾಂಪ್ಕೋ ಪತ್ರದಿಂದ ತಪಾಸಣೆ ಬಿಗು : ಅಡಿಕೆ ಕಳ್ಳಸಾಗಾಣಿಕೆ ನಿಲ್ಲಿಸಬೇಕು ಎಂದು ಕ್ಯಾಂಪ್ಕೋ ಮೇ ತಿಂಗಳಲ್ಲಿ ವಿದೇಶಾಂಗ ಸಚಿವಾಲಯವನ್ನು ಒತ್ತಾಯಿಸಿತ್ತು. ಭಾರತ ಮಾಯನ್ಮಾರ್‌ ಗಡಿಯ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಆಗುತ್ತಿದೆ, ಇದನ್ನು ತಡೆಯಬೇಕು ಎಂದು ಒತ್ತಾಯಿಸಿತ್ತು. ಅದರ ಜೊತೆಗೆ ಕಾಳುಮೆಣಸು ಕೂಡಾ ಕಳ್ಳಸಾಗಾಣಿಕೆಯಾಗುತ್ತಿದೆ. ಭಾರತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಾಳುಮೆಣಸು ಬೆಳೆಯಲಾಗುತ್ತಿದೆ. ಹೀಗಾಗಿ ಕಳ್ಳಸಾಗಾಣಿಕೆ ನಿರ್ಬಂಧಿಸಬೇಕು ಎಂದು ಪತ್ರದಲ್ಲಿ ತಿಳಿಸಿತ್ತು. ಹೀಗಾಗಿ ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಮಣಿಪುರದ ಗೇಟ್‌ಗಳಲ್ಲಿ ಬಿಗಿ ತಪಾಸಣೆಯಾಗುತ್ತಿದೆ. ಹಾಗಿದ್ದರೂ ಕಳ್ಳ ದಾರಿಗಳ ಮೂಲಕ ಪ್ರಯತ್ನ ನಡೆಯುತ್ತಿದೆ. ತ್ರಿಪುರಾ ಸೇರಿದಂತೆ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಅಡಿಕೆ ಬೆಳೆಗಾರರನ್ನು ಕೂಡಾ ಯೋಜಿಸಿಕೊಂಡು ಅಡಿಕೆ ಕಳ್ಳಸಾಗಾಣಿಕೆಯ ಸತತ ಪ್ರಯತ್ನ ನಡೆಯುತ್ತಲೇ ಇದೆ.  ಕಾಳುಮೆಣಸು ಹಾಗೂ ಅಡಿಕೆಯು ಕಳ್ಳಸಾಗಾಣಿಕೆ ಮೂಲಕ ಭಾರತದ ಮಾರುಕಟ್ಟೆಗೆ ಪ್ರವೇಶಿಸದಂತೆ ತಡೆಯಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಬಳಿಕ ತಪಾಸಣೆ ಬಿಗುವಾಗಿದೆ. ಈ ಕಾರಣದಿಂದ ಕಳ್ಳಸಾಗಾಣಿಕೆ ಪ್ರಯತ್ನಗಳು ಈಗ ಬೆಳಕಿಗೆ ಬರುತ್ತಿವೆ ಹಾಗೂ ತಡೆಯೂ ಹೆಚ್ಚಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago