Advertisement
MIRROR FOCUS

ಅಡಿಕೆ ಮಾತ್ರವಲ್ಲ ಕಾಳುಮೆಣಸು ಕೂಡಾ ಬರ್ಮಾದಿಂದ ಕಳ್ಳ ಸಾಗಾಣಿಕೆ…! | 300 ಚೀಲ ಕಾಳುಮೆಣಸು ವಶಕ್ಕೆ ಪಡೆದ ಪೊಲೀಸರು | ಅಕ್ರಮ ತಡೆಗೆ ಬಲ ನೀಡಿದ ಕ್ಯಾಂಪ್ಕೋ ಪತ್ರ |

Share

ಅಸ್ಸಾಂ ಮೂಲಕ ಬರ್ಮಾದಿಂದ ಅಡಿಕೆ ಮಾತ್ರವಲ್ಲ ಕಾಳುಮೆಣಸು ಕೂಡಾ ಕಳ್ಳಸಾಗಾಣಿಕೆಯಾಗುತ್ತಿದೆ. ಈಚೆಗೆ ಪೊಲೀಸರು ಬಿಗು ತಪಾಸಣೆ ಮಾಡುವ ವೇಳೆ ಸುಮಾರು 1 ಕೋಟಿ ರೂಪಾಯಿ ಮೌಲ್ಯದ 13,500 ಕೆಜಿ ಬರ್ಮಾ ಕಾಳುಮೆಣಸನ್ನು ವಶಪಡಿಸಿಕೊಂಡಿದ್ದಾರೆ.

Advertisement

ಅಸ್ಸಾಂ ಪೊಲೀಸರು  ನಾಗಾಲ್ಯಾಂಡ್‌ನ ಗಡಿಯಲ್ಲಿರುವ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಚೆಕ್ ಗೇಟ್‌ನಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಕಾಳುಮೆಣಸು ವಶಪಡಿಸಿಕೊಂಡಿದ್ದಾರೆ. ಕಾಳುಮೆಣಸು ದಿಮಾಪುರ್‌ನಿಂದ ತರಲಾಗುತ್ತಿತ್ತು. ಮೇಘಾಲಯಕ್ಕೆ ಬಂದು ಅಲ್ಲಿಂದ ಉತ್ತರ ಭಾರತಕ್ಕೆ ಕಳ್ಳಸಾಗಾಣೆಯಾಗುತ್ತದೆ ಎಂದು ಪೊಲೀಸರು ತಪಾಸಣೆ ಬಳಿಕ ತಿಳಿಸಿದ್ದಾರೆ. ಈ ಅಕ್ರಮ ಸಾಗಾಟದಲ್ಲಿ  ರಾಜಸ್ಥಾನ ಮೂಲಕ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಹೇಳಿಕೆಯ ಆಧಾರದ ಮೇಲೆ ಪೊಲೀಸರು ನಾಗಾಲ್ಯಾಂಡ್‌ನ ದಿಮಾಪುರದಿಂದ ನಿರ್ಮಲ್‌ಜೀತ್ ಸಿಂಗ್ ಸೇರಿದಂತೆ ಇಬ್ಬರು  ಆರೋಪಿಗಳನ್ನು ಬಂಧಿಸಿದ್ದಾರೆ.

ಬಳಿಕ ಪೊಲೀಸ್ ತಂಡವು ಮೇಘಾಲಯದ ಕೆಲವು ಕಡೆ ಇರುವ ಗೋಡೌನ್‌ನಲ್ಲಿ ದಾಳಿ ನಡೆಸಿದಾಗ  ಮತ್ತೆ100 ಚೀಲ ಕಾಳುಮೆಣಸು ಮತ್ತು 50 ಚೀಲ ಅಡಿಕೆ ವಶಪಡಿಸಿಕೊಂಡಿದೆ.

ಕ್ಯಾಂಪ್ಕೋ ಪತ್ರದಿಂದ ತಪಾಸಣೆ ಬಿಗು : ಅಡಿಕೆ ಕಳ್ಳಸಾಗಾಣಿಕೆ ನಿಲ್ಲಿಸಬೇಕು ಎಂದು ಕ್ಯಾಂಪ್ಕೋ ಮೇ ತಿಂಗಳಲ್ಲಿ ವಿದೇಶಾಂಗ ಸಚಿವಾಲಯವನ್ನು ಒತ್ತಾಯಿಸಿತ್ತು. ಭಾರತ ಮಾಯನ್ಮಾರ್‌ ಗಡಿಯ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಆಗುತ್ತಿದೆ, ಇದನ್ನು ತಡೆಯಬೇಕು ಎಂದು ಒತ್ತಾಯಿಸಿತ್ತು. ಅದರ ಜೊತೆಗೆ ಕಾಳುಮೆಣಸು ಕೂಡಾ ಕಳ್ಳಸಾಗಾಣಿಕೆಯಾಗುತ್ತಿದೆ. ಭಾರತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಾಳುಮೆಣಸು ಬೆಳೆಯಲಾಗುತ್ತಿದೆ. ಹೀಗಾಗಿ ಕಳ್ಳಸಾಗಾಣಿಕೆ ನಿರ್ಬಂಧಿಸಬೇಕು ಎಂದು ಪತ್ರದಲ್ಲಿ ತಿಳಿಸಿತ್ತು. ಹೀಗಾಗಿ ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಮಣಿಪುರದ ಗೇಟ್‌ಗಳಲ್ಲಿ ಬಿಗಿ ತಪಾಸಣೆಯಾಗುತ್ತಿದೆ. ಹಾಗಿದ್ದರೂ ಕಳ್ಳ ದಾರಿಗಳ ಮೂಲಕ ಪ್ರಯತ್ನ ನಡೆಯುತ್ತಿದೆ. ತ್ರಿಪುರಾ ಸೇರಿದಂತೆ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಅಡಿಕೆ ಬೆಳೆಗಾರರನ್ನು ಕೂಡಾ ಯೋಜಿಸಿಕೊಂಡು ಅಡಿಕೆ ಕಳ್ಳಸಾಗಾಣಿಕೆಯ ಸತತ ಪ್ರಯತ್ನ ನಡೆಯುತ್ತಲೇ ಇದೆ.  ಕಾಳುಮೆಣಸು ಹಾಗೂ ಅಡಿಕೆಯು ಕಳ್ಳಸಾಗಾಣಿಕೆ ಮೂಲಕ ಭಾರತದ ಮಾರುಕಟ್ಟೆಗೆ ಪ್ರವೇಶಿಸದಂತೆ ತಡೆಯಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ ಬಳಿಕ ತಪಾಸಣೆ ಬಿಗುವಾಗಿದೆ. ಈ ಕಾರಣದಿಂದ ಕಳ್ಳಸಾಗಾಣಿಕೆ ಪ್ರಯತ್ನಗಳು ಈಗ ಬೆಳಕಿಗೆ ಬರುತ್ತಿವೆ ಹಾಗೂ ತಡೆಯೂ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

24 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago