ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಬರ್ಮಾ ಅಡಿಕೆ ಕಳ್ಳಸಾಗಣೆ ಹಾಗೂ ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED), ಅಸ್ಸಾಂನ ಸಿಲ್ಚಾರ್ನ ಇಬ್ಬರು ಉದ್ಯಮಿಗಳ ನಿವಾಸಗಳ ಮೇಲೆ ದಾಳಿ ನಡೆಸಿದೆ. ಈ ಕಾರ್ಯಾಚರಣೆ ಬಹುಕೋಟಿ ರೂಪಾಯಿ ಮೌಲ್ಯದ ಅಡಿಕೆ ಕಳ್ಳಸಾಗಣೆ ಜಾಲವನ್ನು ಭೇದಿಸುವ ತನಿಖೆಯ ಭಾಗವಾಗಿದೆ.
ಮಾಹಿತಿಯ ಪ್ರಕಾರ, ಇಡಿ ಅಧಿಕಾರಿಗಳು ಸಿಲ್ಚಾರ್ ನಗರದ ವಿವಿಧ ಪ್ರದೇಶಗಳಲ್ಲಿ ಏಕಕಾಲಕ್ಕೆ ಶೋಧ ಕಾರ್ಯಾಚರಣೆ ನಡೆಸಿದ್ದು, ಬರ್ಮಾ ಅಡಿಕೆ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ವ್ಯಕ್ತಿಗಳ ನಿವಾಸಗಳು ಹಾಗೂ ವ್ಯಾಪಾರ ಕೇಂದ್ರಗಳನ್ನು ಪರಿಶೀಲಿಸಿದ್ದಾರೆ. ಈ ಕಾರ್ಯಾಚರಣೆಯು ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ನಡೆದ ದಾಳಿಗಳ ಮುಂದುವರಿದ ಭಾಗವಾಗಿದೆ.
₹1,500 ಕೋಟಿ ಅಕ್ರಮ ಜಾಲದ ತನಿಖೆ : ಇಡಿ ಈಗಾಗಲೇ ಸುಮಾರು ₹1,500 ಕೋಟಿ ಮೌಲ್ಯದ ಅಕ್ರಮ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಜಾಲದ ತನಿಖೆ ನಡೆಸುತ್ತಿದೆ. ತನಿಖೆಯ ಪ್ರಕಾರ, ಮ್ಯಾನ್ಮಾರ್ನಿಂದ ಮಿಜೋರಾಂ ಗಡಿಯ ಮೂಲಕ ಅಕ್ರಮವಾಗಿ ಭಾರತಕ್ಕೆ ತರಲಾದ ಅಡಿಕೆಯನ್ನು ನಕಲಿ ಜಿಎಸ್ಟಿ ದಾಖಲೆಗಳು, ನಕಲಿ ಸರಕು ಸಾಗಣೆ ದಾಖಲೆಗಳು ಹಾಗೂ ಕಪಟ ಸಂಸ್ಥೆಗಳ ಮೂಲಕ ಕಾನೂನುಬದ್ಧ ವ್ಯಾಪಾರವೆಂದು ತೋರಿಸಲಾಗುತ್ತಿತ್ತು.
ಈ ಹಿಂದೆ ನಡೆದ ದಾಳಿಗಳಲ್ಲಿ ₹1.30 ಕೋಟಿ ನಗದು, ಮಹತ್ವದ ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು ಆಸ್ತಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಜೊತೆಗೆ 33 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಅಡಿಕೆ ಬೆಳೆಗಾರರ ಆತಂಕ : ಅಕ್ರಮವಾಗಿ ಆಮದಾಗುವ ವಿದೇಶಿ ಅಡಿಕೆ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಕುಸಿತಕ್ಕೆ ಕಾರಣವಾಗುತ್ತಿದೆ ಎಂದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಅಡಿಕೆ ಬೆಳೆಗಾರರು ಬಹುಕಾಲದಿಂದ ಆರೋಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಡಿಯ ಕ್ರಮವನ್ನು ಅಕ್ರಮ ಅಡಿಕೆ ವ್ಯಾಪಾರದ ವಿರುದ್ಧದ ಮಹತ್ವದ ಕಾರ್ಯಾಚರಣೆಯಾಗಿ ಪರಿಗಣಿಸಲಾಗುತ್ತಿದೆ.
ಇಡಿ ಅಧಿಕಾರಿಗಳು ವಶಪಡಿಸಿಕೊಂಡ ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳನ್ನು ಪರಿಶೀಲಿಸುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
The Enforcement Directorate (ED) has raided the residences of businessmen in Silchar, Assam, as part of its investigation into a ₹1,500-crore Burmese areca nut smuggling and money laundering racket. The probe focuses on illegal imports from Myanmar and the laundering of proceeds through fake invoices and shell entities.
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…