Advertisement
MIRROR FOCUS

#Arecanut | ಮಣಿಪುರದ ಗಲಭೆ ನಡುವೆಯೂ ಟನ್‌ಗಟ್ಟಲೆ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ…! | ಭೂತಾನ್‌ ಅಡಿಕೆಗಿಂತಲೂ ಹೆಚ್ಚಿನ ಸಮಸ್ಯೆ ಈ ಅಡಿಕೆ..! |

Share

ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳ ತಂಡವು ಆಗಸ್ಟ್ 22 ಮತ್ತು 24 ರಂದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಅಕ್ರಮ ಅಡಿಕೆ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಸುಮಾರು 4.8 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 3 ಜನರನ್ನು ಬಂಧಿಸಲಾಗಿದೆ.

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟದ ಮಾಹಿತಿ ಆಧಾರದಲ್ಲಿ  ಅಸ್ಸಾಂ ರೈಪಲ್ಸ್‌ ತಂಡವು ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭ  209 ಚೀಲಗಳ  ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಆಧಾರದಲ್ಲಿ ತನಿಖೆ ನಡೆಸಿದ ಇಲಾಖೆಗಳಿಗೆ ಮಹತ್ವದ ಮಾಹಿತಿ ದೊರೆತಿದೆ. ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯನ್ನು ಟನ್‌ ಗಟ್ಟಲೆ  ಮಣಿಪುರದ ಮೂಲಕ ಭಾರತದ ಹೈದರಾಬಾದ್‌ , ಮಂಗಳೂರು ಹಾಗೂ ಅಹಮದಾಬಾದ್‌ ಮತ್ತು ಬೆಂಗಳೂರು ಕಡೆಗೆ ರವಾನೆಯಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು IFP ವರದಿ ಮಾಡಿದೆ.

ಮಣಿಪುರದಲ್ಲಿ  ಗಲಭೆ ಹಾಗೂ ಆ ಕಾರಣದಿಂದ ನೂರಾರು ಜನರು ಸಾವಿಗೀಡಾದ ಸಂದರ್ಭದಲ್ಲಿ  ಸುಮಾರು ಒಂಬತ್ತು ಟನ್ ಬರ್ಮಾ ಅಡಿಕೆಯನ್ನು ವಿಮಾನ ಸರಕು ಸೇವೆಯ ಮೂಲಕ ನಿಯಮಿತವಾಗಿ ಸಾಗಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಏಳು ಸದಸ್ಯರನ್ನೊಳಗೊಂಡ ಸಿಂಡಿಕೇಟ್ ಇಂಫಾಲ್‌ನ  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಕಾರ್ಗೋ ಸೇವೆಯ ಮೂಲಕ ಮ್ಯಾನ್ಮಾರ್ ಅಡಿಕೆಯ ವ್ಯಾಪಾರವನ್ನು ಇತರ ರಾಜ್ಯಗಳಿಗೆ ರಫ್ತು ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ ಎಂದು IFP ವರದಿಯಲ್ಲಿ ತಿಳಿಸಿದೆ. ಈ ಅಡಿಕೆಯನ್ನು ಕಾಮ್‌ಜಾಂಗ್ ಜಿಲ್ಲೆಯ ಕಸ್ಸೋಮ್ ಖುಲ್ಲೆನ್‌ನಿಂದ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಾಗಾಣಿಕೆಯಲ್ಲಿ ಪ್ರಮುಖ ರಾಜಕಾರಣಿಗಳು ಸೇರಿದಂತೆ ಕೆಲವು ಉನ್ನತ ವ್ಯಕ್ತಿಗಳು  ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕಳೆದ ಆರು ವರ್ಷಗಳಲ್ಲಿ, ಅಸ್ಸಾಂ ಮತ್ತು ಅದರ ನೆರೆಯ ರಾಜ್ಯಗಳಾದ ಮಿಜೋರಾಂ ಮತ್ತು ಮಣಿಪುರದ ಹಲವಾರು ಸ್ಥಳಗಳಲ್ಲಿ ಶಂಕಿತ ಬರ್ಮಾ ಅಡಿಕೆಗಳನ್ನು ತುಂಬಿದ ಟ್ರಕ್‌ಗಳು ಮತ್ತು ರೈಲು ವ್ಯಾಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.  ನೆರೆಯ ದೇಶಗಳಿಂದ ಅಡಿಕೆ ಕಳ್ಳಸಾಗಣೆ ಕುರಿತು ಭಾರತದಲ್ಲಿ 2021 ರಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಯಿತು. ಹಾಗಿದ್ದರೂ ಅಡಿಕೆ ಕಳ್ಳಸಾಗಾಣಿಕೆಗೆ ತಡೆಯಾಗಲಿಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

2 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

5 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

10 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

10 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

21 hours ago