MIRROR FOCUS

#Arecanut | ಮಣಿಪುರದ ಗಲಭೆ ನಡುವೆಯೂ ಟನ್‌ಗಟ್ಟಲೆ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ…! | ಭೂತಾನ್‌ ಅಡಿಕೆಗಿಂತಲೂ ಹೆಚ್ಚಿನ ಸಮಸ್ಯೆ ಈ ಅಡಿಕೆ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳ ತಂಡವು ಆಗಸ್ಟ್ 22 ಮತ್ತು 24 ರಂದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಅಕ್ರಮ ಅಡಿಕೆ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಸುಮಾರು 4.8 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ 3 ಜನರನ್ನು ಬಂಧಿಸಲಾಗಿದೆ.

Advertisement
Advertisement

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟದ ಮಾಹಿತಿ ಆಧಾರದಲ್ಲಿ  ಅಸ್ಸಾಂ ರೈಪಲ್ಸ್‌ ತಂಡವು ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭ  209 ಚೀಲಗಳ  ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಆಧಾರದಲ್ಲಿ ತನಿಖೆ ನಡೆಸಿದ ಇಲಾಖೆಗಳಿಗೆ ಮಹತ್ವದ ಮಾಹಿತಿ ದೊರೆತಿದೆ. ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯನ್ನು ಟನ್‌ ಗಟ್ಟಲೆ  ಮಣಿಪುರದ ಮೂಲಕ ಭಾರತದ ಹೈದರಾಬಾದ್‌ , ಮಂಗಳೂರು ಹಾಗೂ ಅಹಮದಾಬಾದ್‌ ಮತ್ತು ಬೆಂಗಳೂರು ಕಡೆಗೆ ರವಾನೆಯಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು IFP ವರದಿ ಮಾಡಿದೆ.

ಮಣಿಪುರದಲ್ಲಿ  ಗಲಭೆ ಹಾಗೂ ಆ ಕಾರಣದಿಂದ ನೂರಾರು ಜನರು ಸಾವಿಗೀಡಾದ ಸಂದರ್ಭದಲ್ಲಿ  ಸುಮಾರು ಒಂಬತ್ತು ಟನ್ ಬರ್ಮಾ ಅಡಿಕೆಯನ್ನು ವಿಮಾನ ಸರಕು ಸೇವೆಯ ಮೂಲಕ ನಿಯಮಿತವಾಗಿ ಸಾಗಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಏಳು ಸದಸ್ಯರನ್ನೊಳಗೊಂಡ ಸಿಂಡಿಕೇಟ್ ಇಂಫಾಲ್‌ನ  ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ಕಾರ್ಗೋ ಸೇವೆಯ ಮೂಲಕ ಮ್ಯಾನ್ಮಾರ್ ಅಡಿಕೆಯ ವ್ಯಾಪಾರವನ್ನು ಇತರ ರಾಜ್ಯಗಳಿಗೆ ರಫ್ತು ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ ಎಂದು IFP ವರದಿಯಲ್ಲಿ ತಿಳಿಸಿದೆ. ಈ ಅಡಿಕೆಯನ್ನು ಕಾಮ್‌ಜಾಂಗ್ ಜಿಲ್ಲೆಯ ಕಸ್ಸೋಮ್ ಖುಲ್ಲೆನ್‌ನಿಂದ ಸಾಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಾಗಾಣಿಕೆಯಲ್ಲಿ ಪ್ರಮುಖ ರಾಜಕಾರಣಿಗಳು ಸೇರಿದಂತೆ ಕೆಲವು ಉನ್ನತ ವ್ಯಕ್ತಿಗಳು  ಭಾಗಿಯಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Advertisement

ಕಳೆದ ಆರು ವರ್ಷಗಳಲ್ಲಿ, ಅಸ್ಸಾಂ ಮತ್ತು ಅದರ ನೆರೆಯ ರಾಜ್ಯಗಳಾದ ಮಿಜೋರಾಂ ಮತ್ತು ಮಣಿಪುರದ ಹಲವಾರು ಸ್ಥಳಗಳಲ್ಲಿ ಶಂಕಿತ ಬರ್ಮಾ ಅಡಿಕೆಗಳನ್ನು ತುಂಬಿದ ಟ್ರಕ್‌ಗಳು ಮತ್ತು ರೈಲು ವ್ಯಾಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.  ನೆರೆಯ ದೇಶಗಳಿಂದ ಅಡಿಕೆ ಕಳ್ಳಸಾಗಣೆ ಕುರಿತು ಭಾರತದಲ್ಲಿ 2021 ರಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಯಿತು. ಹಾಗಿದ್ದರೂ ಅಡಿಕೆ ಕಳ್ಳಸಾಗಾಣಿಕೆಗೆ ತಡೆಯಾಗಲಿಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

27 minutes ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

8 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

14 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

15 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago