ಅಸ್ಸಾಂನ ಹೈಲಕಂಡಿಯ ಗ್ರಾಮವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 300 ಚೀಲದಲ್ಲಿದ್ದ 15 ಟನ್ ಬರ್ಮಾ ಅಡಿಕೆಯನ್ನು ಹೈಲಕಂಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆ ಆರೋಪಿ ರೋಸನ್ ಉದ್ದೀನ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಅಡಿಕೆ ಸಂಗ್ರಹಿಸಿಟ್ಟಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಅಡಿಕೆ ದಾಸ್ತಾನು ಪತ್ತೆಯಾಗಿದೆ. ಬರ್ಮಾ ಅಡಿಕೆ ಭಾರತದೊಳಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ತಲೆಹೊರೆಯ ಮೂಲಕ ದೇಶದ ಗಡಿಭಾಗಗಳಲ್ಲಿ ಅಡಿಕೆ ತಂದು ದಾಸ್ತಾನು ಇರಿಸುವುದು ನಡೆಯುತ್ತಿದೆ. ಪೊಲೀಸರು ಆಗಾಗ ದಾಳಿ ನಡೆಸಿದರೂ ಈ ಜಾಲ ನಿರಂತರವಾಗಿ ನಡೆಯುತ್ತಿದೆ.
ಹೀಗೇ ದಾಸ್ತಾನು ಆಗಿರುವ ಅಡಿಕೆ ಭಾರತದ ವಿವಿಧ ಕಡೆಗಳಿಗೆ ಬರುತ್ತಿದೆ. ಈಚೆಗೆ ಅದೇ ಮಾದರಿಯಲ್ಲಿ ದಾಸ್ತಾನು ಆಗಿರುವ ಕಳಪೆ ಗುಣಮಟ್ಟದ ಅಡಿಕೆಯು ದಕ್ಷಿಣ ಕನ್ನಡ ಸೇರಿದಂತೆ ದೇಶದ ಹಲವು ಕಡೆಗೆ ಅಡಿಕೆ ಬಂದಿರುವ ಬಗ್ಗೆ ಮಾರುಕಟ್ಟೆ ವಲಯ ಹೇಳುತ್ತದೆ. ಈ ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…