ಅಸ್ಸಾಂನ ಹೈಲಕಂಡಿಯ ಗ್ರಾಮವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 300 ಚೀಲದಲ್ಲಿದ್ದ 15 ಟನ್ ಬರ್ಮಾ ಅಡಿಕೆಯನ್ನು ಹೈಲಕಂಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆ ಆರೋಪಿ ರೋಸನ್ ಉದ್ದೀನ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಅಡಿಕೆ ಸಂಗ್ರಹಿಸಿಟ್ಟಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಅಡಿಕೆ ದಾಸ್ತಾನು ಪತ್ತೆಯಾಗಿದೆ. ಬರ್ಮಾ ಅಡಿಕೆ ಭಾರತದೊಳಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ತಲೆಹೊರೆಯ ಮೂಲಕ ದೇಶದ ಗಡಿಭಾಗಗಳಲ್ಲಿ ಅಡಿಕೆ ತಂದು ದಾಸ್ತಾನು ಇರಿಸುವುದು ನಡೆಯುತ್ತಿದೆ. ಪೊಲೀಸರು ಆಗಾಗ ದಾಳಿ ನಡೆಸಿದರೂ ಈ ಜಾಲ ನಿರಂತರವಾಗಿ ನಡೆಯುತ್ತಿದೆ.
ಹೀಗೇ ದಾಸ್ತಾನು ಆಗಿರುವ ಅಡಿಕೆ ಭಾರತದ ವಿವಿಧ ಕಡೆಗಳಿಗೆ ಬರುತ್ತಿದೆ. ಈಚೆಗೆ ಅದೇ ಮಾದರಿಯಲ್ಲಿ ದಾಸ್ತಾನು ಆಗಿರುವ ಕಳಪೆ ಗುಣಮಟ್ಟದ ಅಡಿಕೆಯು ದಕ್ಷಿಣ ಕನ್ನಡ ಸೇರಿದಂತೆ ದೇಶದ ಹಲವು ಕಡೆಗೆ ಅಡಿಕೆ ಬಂದಿರುವ ಬಗ್ಗೆ ಮಾರುಕಟ್ಟೆ ವಲಯ ಹೇಳುತ್ತದೆ. ಈ ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…