ಅಸ್ಸಾಂನ ಹೈಲಕಂಡಿಯ ಗ್ರಾಮವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 300 ಚೀಲದಲ್ಲಿದ್ದ 15 ಟನ್ ಬರ್ಮಾ ಅಡಿಕೆಯನ್ನು ಹೈಲಕಂಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆ ಆರೋಪಿ ರೋಸನ್ ಉದ್ದೀನ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಅಡಿಕೆ ಸಂಗ್ರಹಿಸಿಟ್ಟಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಅಡಿಕೆ ದಾಸ್ತಾನು ಪತ್ತೆಯಾಗಿದೆ. ಬರ್ಮಾ ಅಡಿಕೆ ಭಾರತದೊಳಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ತಲೆಹೊರೆಯ ಮೂಲಕ ದೇಶದ ಗಡಿಭಾಗಗಳಲ್ಲಿ ಅಡಿಕೆ ತಂದು ದಾಸ್ತಾನು ಇರಿಸುವುದು ನಡೆಯುತ್ತಿದೆ. ಪೊಲೀಸರು ಆಗಾಗ ದಾಳಿ ನಡೆಸಿದರೂ ಈ ಜಾಲ ನಿರಂತರವಾಗಿ ನಡೆಯುತ್ತಿದೆ.
ಹೀಗೇ ದಾಸ್ತಾನು ಆಗಿರುವ ಅಡಿಕೆ ಭಾರತದ ವಿವಿಧ ಕಡೆಗಳಿಗೆ ಬರುತ್ತಿದೆ. ಈಚೆಗೆ ಅದೇ ಮಾದರಿಯಲ್ಲಿ ದಾಸ್ತಾನು ಆಗಿರುವ ಕಳಪೆ ಗುಣಮಟ್ಟದ ಅಡಿಕೆಯು ದಕ್ಷಿಣ ಕನ್ನಡ ಸೇರಿದಂತೆ ದೇಶದ ಹಲವು ಕಡೆಗೆ ಅಡಿಕೆ ಬಂದಿರುವ ಬಗ್ಗೆ ಮಾರುಕಟ್ಟೆ ವಲಯ ಹೇಳುತ್ತದೆ. ಈ ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…