ಅಸ್ಸಾಂನ ಹೈಲಕಂಡಿಯ ಗ್ರಾಮವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 300 ಚೀಲದಲ್ಲಿದ್ದ 15 ಟನ್ ಬರ್ಮಾ ಅಡಿಕೆಯನ್ನು ಹೈಲಕಂಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆ ಆರೋಪಿ ರೋಸನ್ ಉದ್ದೀನ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಅಡಿಕೆ ಸಂಗ್ರಹಿಸಿಟ್ಟಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಅಡಿಕೆ ದಾಸ್ತಾನು ಪತ್ತೆಯಾಗಿದೆ. ಬರ್ಮಾ ಅಡಿಕೆ ಭಾರತದೊಳಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ತಲೆಹೊರೆಯ ಮೂಲಕ ದೇಶದ ಗಡಿಭಾಗಗಳಲ್ಲಿ ಅಡಿಕೆ ತಂದು ದಾಸ್ತಾನು ಇರಿಸುವುದು ನಡೆಯುತ್ತಿದೆ. ಪೊಲೀಸರು ಆಗಾಗ ದಾಳಿ ನಡೆಸಿದರೂ ಈ ಜಾಲ ನಿರಂತರವಾಗಿ ನಡೆಯುತ್ತಿದೆ.
ಹೀಗೇ ದಾಸ್ತಾನು ಆಗಿರುವ ಅಡಿಕೆ ಭಾರತದ ವಿವಿಧ ಕಡೆಗಳಿಗೆ ಬರುತ್ತಿದೆ. ಈಚೆಗೆ ಅದೇ ಮಾದರಿಯಲ್ಲಿ ದಾಸ್ತಾನು ಆಗಿರುವ ಕಳಪೆ ಗುಣಮಟ್ಟದ ಅಡಿಕೆಯು ದಕ್ಷಿಣ ಕನ್ನಡ ಸೇರಿದಂತೆ ದೇಶದ ಹಲವು ಕಡೆಗೆ ಅಡಿಕೆ ಬಂದಿರುವ ಬಗ್ಗೆ ಮಾರುಕಟ್ಟೆ ವಲಯ ಹೇಳುತ್ತದೆ. ಈ ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…