ಅಸ್ಸಾಂನ ಹೈಲಕಂಡಿಯ ಗ್ರಾಮವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 300 ಚೀಲದಲ್ಲಿದ್ದ 15 ಟನ್ ಬರ್ಮಾ ಅಡಿಕೆಯನ್ನು ಹೈಲಕಂಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆ ಆರೋಪಿ ರೋಸನ್ ಉದ್ದೀನ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಅಡಿಕೆ ಸಂಗ್ರಹಿಸಿಟ್ಟಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಅಡಿಕೆ ದಾಸ್ತಾನು ಪತ್ತೆಯಾಗಿದೆ. ಬರ್ಮಾ ಅಡಿಕೆ ಭಾರತದೊಳಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ತಲೆಹೊರೆಯ ಮೂಲಕ ದೇಶದ ಗಡಿಭಾಗಗಳಲ್ಲಿ ಅಡಿಕೆ ತಂದು ದಾಸ್ತಾನು ಇರಿಸುವುದು ನಡೆಯುತ್ತಿದೆ. ಪೊಲೀಸರು ಆಗಾಗ ದಾಳಿ ನಡೆಸಿದರೂ ಈ ಜಾಲ ನಿರಂತರವಾಗಿ ನಡೆಯುತ್ತಿದೆ.
ಹೀಗೇ ದಾಸ್ತಾನು ಆಗಿರುವ ಅಡಿಕೆ ಭಾರತದ ವಿವಿಧ ಕಡೆಗಳಿಗೆ ಬರುತ್ತಿದೆ. ಈಚೆಗೆ ಅದೇ ಮಾದರಿಯಲ್ಲಿ ದಾಸ್ತಾನು ಆಗಿರುವ ಕಳಪೆ ಗುಣಮಟ್ಟದ ಅಡಿಕೆಯು ದಕ್ಷಿಣ ಕನ್ನಡ ಸೇರಿದಂತೆ ದೇಶದ ಹಲವು ಕಡೆಗೆ ಅಡಿಕೆ ಬಂದಿರುವ ಬಗ್ಗೆ ಮಾರುಕಟ್ಟೆ ವಲಯ ಹೇಳುತ್ತದೆ. ಈ ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…