ಅಸ್ಸಾಂನ ಹೈಲಕಂಡಿಯ ಗ್ರಾಮವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 300 ಚೀಲದಲ್ಲಿದ್ದ 15 ಟನ್ ಬರ್ಮಾ ಅಡಿಕೆಯನ್ನು ಹೈಲಕಂಡಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆ ಆರೋಪಿ ರೋಸನ್ ಉದ್ದೀನ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಅಡಿಕೆ ಸಂಗ್ರಹಿಸಿಟ್ಟಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಅಡಿಕೆ ದಾಸ್ತಾನು ಪತ್ತೆಯಾಗಿದೆ. ಬರ್ಮಾ ಅಡಿಕೆ ಭಾರತದೊಳಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಹಾಗಿದ್ದರೂ ತಲೆಹೊರೆಯ ಮೂಲಕ ದೇಶದ ಗಡಿಭಾಗಗಳಲ್ಲಿ ಅಡಿಕೆ ತಂದು ದಾಸ್ತಾನು ಇರಿಸುವುದು ನಡೆಯುತ್ತಿದೆ. ಪೊಲೀಸರು ಆಗಾಗ ದಾಳಿ ನಡೆಸಿದರೂ ಈ ಜಾಲ ನಿರಂತರವಾಗಿ ನಡೆಯುತ್ತಿದೆ.
ಹೀಗೇ ದಾಸ್ತಾನು ಆಗಿರುವ ಅಡಿಕೆ ಭಾರತದ ವಿವಿಧ ಕಡೆಗಳಿಗೆ ಬರುತ್ತಿದೆ. ಈಚೆಗೆ ಅದೇ ಮಾದರಿಯಲ್ಲಿ ದಾಸ್ತಾನು ಆಗಿರುವ ಕಳಪೆ ಗುಣಮಟ್ಟದ ಅಡಿಕೆಯು ದಕ್ಷಿಣ ಕನ್ನಡ ಸೇರಿದಂತೆ ದೇಶದ ಹಲವು ಕಡೆಗೆ ಅಡಿಕೆ ಬಂದಿರುವ ಬಗ್ಗೆ ಮಾರುಕಟ್ಟೆ ವಲಯ ಹೇಳುತ್ತದೆ. ಈ ಕಾರಣದಿಂದ ಇಲ್ಲಿನ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ.
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…
ದಿಮಾಪುರ ಕಸ್ಟಮ್ಸ್ ಜಪ್ತಿ ಮಾಡಿದ್ದ ₹2.22 ಕೋಟಿ ಮೌಲ್ಯದ 33.6 ಟನ್ ಅಡಿಕೆ…
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…