Advertisement
MIRROR FOCUS

#Arecanut | ಅಡಿಕೆ ಮಾರುಕಟ್ಟೆಯಲ್ಲಿ ನಿರುತ್ಸಾಹ | ಬರ್ಮಾ ಅಡಿಕೆಗೆ ಇನ್ನೂ ಉತ್ಸಾಹ | ಅಸ್ಸಾಂನಲ್ಲಿ ನಿರಂತರ ತಡೆ | ಮತ್ತೆ 249 ಚೀಲ ಅಡಿಕೆ ವಶಕ್ಕೆ |

Share

ಚಾಲಿ ಅಡಿಕೆ ಮಾರುಕಟ್ಟೆ ಕಳೆದ ದಿನಗಳಿಂದ ನಿರುತ್ಸಾಹ ಕಂಡುಬಂದಿದೆ. ಹೊಸ ಚಾಲಿ ಅಡಿಕೆ 380 ಆಸುಪಾಸಿನಲ್ಲಿ ಹಾಗೂ  ಹಳೆ ಚಾಲಿ ಅಡಿಕೆ  440 ಹಾಗೂ ಚೋಲ್‌ ಅಡಿಕೆ 470 ರೂಪಾಯಿ ಆಸುಪಾಸಿನಲ್ಲಿಯೇ ಇದೆ. ಸದ್ಯ ಯಾವುದೇ ಉತ್ಸಾಹ ಕಾಣುತ್ತಿಲ್ಲ ಮಾರುಕಟ್ಟೆಯಲ್ಲಿ. ಈ ನಡುವೆಯೇ ಬರ್ಮಾ ಅಡಿಕೆಯ ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ. ಸೋಮವಾರ ಅಸ್ಸಾಂ ಗಡಿಭದ್ರತಾ ಪಡೆ ಮತ್ತೆ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.

ಅಡಿಕೆ  ಕಳ್ಳಸಾಗಣೆ ಚಟುವಟಿಕೆಗಳ ವಿರುದ್ಧ  ಅಸ್ಸಾಂ ರೈಫಲ್ಸ್‌ ನಿರಂತರ ಕೆಲಸ ಮಾಡುತ್ತಿದೆ. ಸೋಮವಾರ ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ  249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಡಿಕೆ ಸೇರಿದಂತೆ ಇತರ ವಸ್ತುಗಳ ಕಳ್ಳಸಾಗಣೆಯು ಮಿಜೋರಾಂ ರಾಜ್ಯ ಮತ್ತು ಇಡೀ ಭಾರತಕ್ಕೆ ಪ್ರಮುಖ ಕಳವಳವಾಗಿದೆ. ಅಸ್ಸಾಂ ರೈಫಲ್ಸ್  ಅಕ್ರಮ ಕಳ್ಳಸಾಗಣೆ ಚಟುವಟಿಕೆಗಳನ್ನು ಎದುರಿಸಲು ಸತತವಾಗಿ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ.

ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯನ್ನು ಈಶಾನ್ಯ ರಾಜ್ಯಗಳ ಮೂಲಕ ಕಳ್ಳಸಾಗಾಣಿಕೆ ಮಾಡಿ ಭಾರತದೊಳಕ್ಕೆ ತರೆಲಾಗುತ್ತಿದೆ. ಇದಕ್ಕೆ ಸತತ ಕಡಿವಾಣ ಬೀಳುತ್ತಿದೆ. ಚಾಲಿ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಕಳ್ಳಸಾಗಾಣಿಕೆ ಮೂಲಕ ತರಲು ಪ್ರಯತ್ನ ನಡೆಯುತ್ತಲೇ ಇದೆ. ಹೀಗೆ ವಶ ಪಡಿಸಿಕೊಂಡ ಅಡಿಕೆಯ ಆಮದುದಾರರು ಹಾಗೂ ಅದರ ಹಿಂದೆ ಇರುವ ಪ್ರಮುಖ ವ್ಯಕ್ತಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು. ಹಾಗಿದ್ದರೂ ಮತ್ತೆ ಈ ಸಾಗಾಣಿಕೆ ನಡೆಯುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

1 hour ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

5 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

5 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

16 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

17 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

21 hours ago