Advertisement
MIRROR FOCUS

#Arecanut | ಅಡಿಕೆ ಮಾರುಕಟ್ಟೆಯಲ್ಲಿ ನಿರುತ್ಸಾಹ | ಬರ್ಮಾ ಅಡಿಕೆಗೆ ಇನ್ನೂ ಉತ್ಸಾಹ | ಅಸ್ಸಾಂನಲ್ಲಿ ನಿರಂತರ ತಡೆ | ಮತ್ತೆ 249 ಚೀಲ ಅಡಿಕೆ ವಶಕ್ಕೆ |

Share

ಚಾಲಿ ಅಡಿಕೆ ಮಾರುಕಟ್ಟೆ ಕಳೆದ ದಿನಗಳಿಂದ ನಿರುತ್ಸಾಹ ಕಂಡುಬಂದಿದೆ. ಹೊಸ ಚಾಲಿ ಅಡಿಕೆ 380 ಆಸುಪಾಸಿನಲ್ಲಿ ಹಾಗೂ  ಹಳೆ ಚಾಲಿ ಅಡಿಕೆ  440 ಹಾಗೂ ಚೋಲ್‌ ಅಡಿಕೆ 470 ರೂಪಾಯಿ ಆಸುಪಾಸಿನಲ್ಲಿಯೇ ಇದೆ. ಸದ್ಯ ಯಾವುದೇ ಉತ್ಸಾಹ ಕಾಣುತ್ತಿಲ್ಲ ಮಾರುಕಟ್ಟೆಯಲ್ಲಿ. ಈ ನಡುವೆಯೇ ಬರ್ಮಾ ಅಡಿಕೆಯ ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ. ಸೋಮವಾರ ಅಸ್ಸಾಂ ಗಡಿಭದ್ರತಾ ಪಡೆ ಮತ್ತೆ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.

ಅಡಿಕೆ  ಕಳ್ಳಸಾಗಣೆ ಚಟುವಟಿಕೆಗಳ ವಿರುದ್ಧ  ಅಸ್ಸಾಂ ರೈಫಲ್ಸ್‌ ನಿರಂತರ ಕೆಲಸ ಮಾಡುತ್ತಿದೆ. ಸೋಮವಾರ ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ  249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಡಿಕೆ ಸೇರಿದಂತೆ ಇತರ ವಸ್ತುಗಳ ಕಳ್ಳಸಾಗಣೆಯು ಮಿಜೋರಾಂ ರಾಜ್ಯ ಮತ್ತು ಇಡೀ ಭಾರತಕ್ಕೆ ಪ್ರಮುಖ ಕಳವಳವಾಗಿದೆ. ಅಸ್ಸಾಂ ರೈಫಲ್ಸ್  ಅಕ್ರಮ ಕಳ್ಳಸಾಗಣೆ ಚಟುವಟಿಕೆಗಳನ್ನು ಎದುರಿಸಲು ಸತತವಾಗಿ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ.

ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯನ್ನು ಈಶಾನ್ಯ ರಾಜ್ಯಗಳ ಮೂಲಕ ಕಳ್ಳಸಾಗಾಣಿಕೆ ಮಾಡಿ ಭಾರತದೊಳಕ್ಕೆ ತರೆಲಾಗುತ್ತಿದೆ. ಇದಕ್ಕೆ ಸತತ ಕಡಿವಾಣ ಬೀಳುತ್ತಿದೆ. ಚಾಲಿ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಕಳ್ಳಸಾಗಾಣಿಕೆ ಮೂಲಕ ತರಲು ಪ್ರಯತ್ನ ನಡೆಯುತ್ತಲೇ ಇದೆ. ಹೀಗೆ ವಶ ಪಡಿಸಿಕೊಂಡ ಅಡಿಕೆಯ ಆಮದುದಾರರು ಹಾಗೂ ಅದರ ಹಿಂದೆ ಇರುವ ಪ್ರಮುಖ ವ್ಯಕ್ತಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು. ಹಾಗಿದ್ದರೂ ಮತ್ತೆ ಈ ಸಾಗಾಣಿಕೆ ನಡೆಯುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

1 day ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago