Advertisement
MIRROR FOCUS

#Arecanut | ಅಡಿಕೆ ಮಾರುಕಟ್ಟೆಯಲ್ಲಿ ನಿರುತ್ಸಾಹ | ಬರ್ಮಾ ಅಡಿಕೆಗೆ ಇನ್ನೂ ಉತ್ಸಾಹ | ಅಸ್ಸಾಂನಲ್ಲಿ ನಿರಂತರ ತಡೆ | ಮತ್ತೆ 249 ಚೀಲ ಅಡಿಕೆ ವಶಕ್ಕೆ |

Share

ಚಾಲಿ ಅಡಿಕೆ ಮಾರುಕಟ್ಟೆ ಕಳೆದ ದಿನಗಳಿಂದ ನಿರುತ್ಸಾಹ ಕಂಡುಬಂದಿದೆ. ಹೊಸ ಚಾಲಿ ಅಡಿಕೆ 380 ಆಸುಪಾಸಿನಲ್ಲಿ ಹಾಗೂ  ಹಳೆ ಚಾಲಿ ಅಡಿಕೆ  440 ಹಾಗೂ ಚೋಲ್‌ ಅಡಿಕೆ 470 ರೂಪಾಯಿ ಆಸುಪಾಸಿನಲ್ಲಿಯೇ ಇದೆ. ಸದ್ಯ ಯಾವುದೇ ಉತ್ಸಾಹ ಕಾಣುತ್ತಿಲ್ಲ ಮಾರುಕಟ್ಟೆಯಲ್ಲಿ. ಈ ನಡುವೆಯೇ ಬರ್ಮಾ ಅಡಿಕೆಯ ಆಸಕ್ತಿ ಇನ್ನೂ ಕಡಿಮೆಯಾಗಿಲ್ಲ. ಸೋಮವಾರ ಅಸ್ಸಾಂ ಗಡಿಭದ್ರತಾ ಪಡೆ ಮತ್ತೆ 249 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.

ಅಡಿಕೆ  ಕಳ್ಳಸಾಗಣೆ ಚಟುವಟಿಕೆಗಳ ವಿರುದ್ಧ  ಅಸ್ಸಾಂ ರೈಫಲ್ಸ್‌ ನಿರಂತರ ಕೆಲಸ ಮಾಡುತ್ತಿದೆ. ಸೋಮವಾರ ಮಿಜೋರಾಂನ ಚಂಫೈ ಜಿಲ್ಲೆಯ ವಿಲ್ ಚುಂಗ್ಟೆಯ ಪ್ರದೇಶದಲ್ಲಿ  249 ಚೀಲ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ಅಡಿಕೆ ಸೇರಿದಂತೆ ಇತರ ವಸ್ತುಗಳ ಕಳ್ಳಸಾಗಣೆಯು ಮಿಜೋರಾಂ ರಾಜ್ಯ ಮತ್ತು ಇಡೀ ಭಾರತಕ್ಕೆ ಪ್ರಮುಖ ಕಳವಳವಾಗಿದೆ. ಅಸ್ಸಾಂ ರೈಫಲ್ಸ್  ಅಕ್ರಮ ಕಳ್ಳಸಾಗಣೆ ಚಟುವಟಿಕೆಗಳನ್ನು ಎದುರಿಸಲು ಸತತವಾಗಿ ತನ್ನ ಪ್ರಯತ್ನಗಳನ್ನು ತೀವ್ರಗೊಳಿಸಿದೆ.

ಕಳೆದ ಕೆಲವು ಸಮಯಗಳಿಂದ ಬರ್ಮಾ ಅಡಿಕೆಯನ್ನು ಈಶಾನ್ಯ ರಾಜ್ಯಗಳ ಮೂಲಕ ಕಳ್ಳಸಾಗಾಣಿಕೆ ಮಾಡಿ ಭಾರತದೊಳಕ್ಕೆ ತರೆಲಾಗುತ್ತಿದೆ. ಇದಕ್ಕೆ ಸತತ ಕಡಿವಾಣ ಬೀಳುತ್ತಿದೆ. ಚಾಲಿ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಕಳ್ಳಸಾಗಾಣಿಕೆ ಮೂಲಕ ತರಲು ಪ್ರಯತ್ನ ನಡೆಯುತ್ತಲೇ ಇದೆ. ಹೀಗೆ ವಶ ಪಡಿಸಿಕೊಂಡ ಅಡಿಕೆಯ ಆಮದುದಾರರು ಹಾಗೂ ಅದರ ಹಿಂದೆ ಇರುವ ಪ್ರಮುಖ ವ್ಯಕ್ತಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು. ಹಾಗಿದ್ದರೂ ಮತ್ತೆ ಈ ಸಾಗಾಣಿಕೆ ನಡೆಯುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

12 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

13 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago