ದಸರಾ ಹಬ್ಬದ ಹಿನ್ನೆಲೆ ಊರಿಗೆ ಹೋಗುವ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಗಳಿಗೆ ಆರ್ ಟಿಒ (RTO) ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ಹೋಗುವ ಪ್ರಯಾಣಿಕರಿಂದ ಖಾಸಗಿ ಬಸ್ ಮಾಲೀಕರು ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರು ಬಂದ ಹಿನ್ನೆಲೆ ಆರ್ ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಕಳೆದ 3 ದಿನಗಳಲ್ಲಿ ಬರೋಬ್ಬರಿ 400 ಬಸ್ ಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಹಬ್ಬದ ಸಮಯದಲ್ಲಿ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕಠಿಣ ಕ್ರಮ, ಎಚ್ಚರಿಕೆ ನೀಡಿದರೂ , ಖಾಸಗಿ ಬಸ್ ಮಾಲೀಕರು ಹೆಚ್ಚಿನ ಹಣ ಪಡೆದಿದ್ದಾರೆ. ಈ ಹಿನ್ನೆಲೆ ಪ್ರಯಾಣಿಕರು ಆರ್ ಟಿಒ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel