ರಾಜ್ಯರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸುಪಾಸು, ವಿಕಲಚೇತನರ ರಿಯಾಯಿತಿ ಬಸ್ಸುಪಾಸು, ಅಂಧರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್, ಅಪಘಾತ ಪರಿಹಾರ ನಿಧಿ ಇವುಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.
ನಿಗಮದ ಬಸ್ಸುಪಾಸು ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್ಗೆ ಅಪ್ಲೋಡ್ ಮಾಡಿದ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಪಟ್ಟ ಶಾಲಾ/ಕಾಲೇಜುಗಳಲ್ಲಿ ನೀಡಬೇಕಾಗಿರುತ್ತದೆ. ಪಾಸಿನ ಶುಲ್ಕವನ್ನು ಶಾಲಾ/ಕಾಲೇಜಿನಲ್ಲಿ ಪಾವತಿಸಿ ಶಾಲಾ/ಕಾಲೇಜು ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸು ನಿಲ್ದಾಣದ ಪಾಸ್ ಕೌಂಟರ್ನಲ್ಲಿ ಮಾತ್ರ ಪಾವತಿಸಲು ಅವಕಾಶವಿರುತ್ತದೆ.
ಸಂಬಂಧಪಟ್ಟಎಲ್ಲಾ ದಾಖಲೆಗಳನ್ನು JPEG ಹಾಗೂ PDF ನಮೂನೆಯಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿಅಪ್ಲೋಡ್ ಮಾಡಿ ಸದರಿ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಹಾಗೂ ಪಾಸ್ನ ಶುಲ್ಕವನ್ನು ನಿಗಮದ ಪಾಸ್ಕೌಂಟರ್ನಲ್ಲಿ ನೀಡಿ ಪಾಸುಗಳನ್ನು ಪಡೆಯಬಹುದು ಎಂದು ಕರಾರಸಾಸಂ, ಮಂಗಳೂರು, ವಿಭಾಗೀಯ ನಿಯಂತ್ರಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…