ರಾಜ್ಯರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸುಪಾಸು, ವಿಕಲಚೇತನರ ರಿಯಾಯಿತಿ ಬಸ್ಸುಪಾಸು, ಅಂಧರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್, ಅಪಘಾತ ಪರಿಹಾರ ನಿಧಿ ಇವುಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.
ನಿಗಮದ ಬಸ್ಸುಪಾಸು ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್ಗೆ ಅಪ್ಲೋಡ್ ಮಾಡಿದ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಪಟ್ಟ ಶಾಲಾ/ಕಾಲೇಜುಗಳಲ್ಲಿ ನೀಡಬೇಕಾಗಿರುತ್ತದೆ. ಪಾಸಿನ ಶುಲ್ಕವನ್ನು ಶಾಲಾ/ಕಾಲೇಜಿನಲ್ಲಿ ಪಾವತಿಸಿ ಶಾಲಾ/ಕಾಲೇಜು ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸು ನಿಲ್ದಾಣದ ಪಾಸ್ ಕೌಂಟರ್ನಲ್ಲಿ ಮಾತ್ರ ಪಾವತಿಸಲು ಅವಕಾಶವಿರುತ್ತದೆ.
ಸಂಬಂಧಪಟ್ಟಎಲ್ಲಾ ದಾಖಲೆಗಳನ್ನು JPEG ಹಾಗೂ PDF ನಮೂನೆಯಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿಅಪ್ಲೋಡ್ ಮಾಡಿ ಸದರಿ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಹಾಗೂ ಪಾಸ್ನ ಶುಲ್ಕವನ್ನು ನಿಗಮದ ಪಾಸ್ಕೌಂಟರ್ನಲ್ಲಿ ನೀಡಿ ಪಾಸುಗಳನ್ನು ಪಡೆಯಬಹುದು ಎಂದು ಕರಾರಸಾಸಂ, ಮಂಗಳೂರು, ವಿಭಾಗೀಯ ನಿಯಂತ್ರಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…