ರಾಜ್ಯರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸುಪಾಸು, ವಿಕಲಚೇತನರ ರಿಯಾಯಿತಿ ಬಸ್ಸುಪಾಸು, ಅಂಧರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್, ಅಪಘಾತ ಪರಿಹಾರ ನಿಧಿ ಇವುಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.
ನಿಗಮದ ಬಸ್ಸುಪಾಸು ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್ಗೆ ಅಪ್ಲೋಡ್ ಮಾಡಿದ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಪಟ್ಟ ಶಾಲಾ/ಕಾಲೇಜುಗಳಲ್ಲಿ ನೀಡಬೇಕಾಗಿರುತ್ತದೆ. ಪಾಸಿನ ಶುಲ್ಕವನ್ನು ಶಾಲಾ/ಕಾಲೇಜಿನಲ್ಲಿ ಪಾವತಿಸಿ ಶಾಲಾ/ಕಾಲೇಜು ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸು ನಿಲ್ದಾಣದ ಪಾಸ್ ಕೌಂಟರ್ನಲ್ಲಿ ಮಾತ್ರ ಪಾವತಿಸಲು ಅವಕಾಶವಿರುತ್ತದೆ.
ಸಂಬಂಧಪಟ್ಟಎಲ್ಲಾ ದಾಖಲೆಗಳನ್ನು JPEG ಹಾಗೂ PDF ನಮೂನೆಯಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿಅಪ್ಲೋಡ್ ಮಾಡಿ ಸದರಿ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಹಾಗೂ ಪಾಸ್ನ ಶುಲ್ಕವನ್ನು ನಿಗಮದ ಪಾಸ್ಕೌಂಟರ್ನಲ್ಲಿ ನೀಡಿ ಪಾಸುಗಳನ್ನು ಪಡೆಯಬಹುದು ಎಂದು ಕರಾರಸಾಸಂ, ಮಂಗಳೂರು, ವಿಭಾಗೀಯ ನಿಯಂತ್ರಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…