ರಾಜ್ಯರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸುಪಾಸು, ವಿಕಲಚೇತನರ ರಿಯಾಯಿತಿ ಬಸ್ಸುಪಾಸು, ಅಂಧರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ಸುಪಾಸು, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್, ಅಪಘಾತ ಪರಿಹಾರ ನಿಧಿ ಇವುಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.
ನಿಗಮದ ಬಸ್ಸುಪಾಸು ಪಡೆಯುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸೇವಾಸಿಂಧು ಪೋರ್ಟಲ್ಗೆ ಅಪ್ಲೋಡ್ ಮಾಡಿದ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಸಂಬಂಧಪಟ್ಟ ಶಾಲಾ/ಕಾಲೇಜುಗಳಲ್ಲಿ ನೀಡಬೇಕಾಗಿರುತ್ತದೆ. ಪಾಸಿನ ಶುಲ್ಕವನ್ನು ಶಾಲಾ/ಕಾಲೇಜಿನಲ್ಲಿ ಪಾವತಿಸಿ ಶಾಲಾ/ಕಾಲೇಜು ಮುಖಾಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸು ನಿಲ್ದಾಣದ ಪಾಸ್ ಕೌಂಟರ್ನಲ್ಲಿ ಮಾತ್ರ ಪಾವತಿಸಲು ಅವಕಾಶವಿರುತ್ತದೆ.
ಸಂಬಂಧಪಟ್ಟಎಲ್ಲಾ ದಾಖಲೆಗಳನ್ನು JPEG ಹಾಗೂ PDF ನಮೂನೆಯಲ್ಲಿ ಸೇವಾಸಿಂಧು ಪೋರ್ಟಲ್ ನಲ್ಲಿಅಪ್ಲೋಡ್ ಮಾಡಿ ಸದರಿ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಹಾಗೂ ಪಾಸ್ನ ಶುಲ್ಕವನ್ನು ನಿಗಮದ ಪಾಸ್ಕೌಂಟರ್ನಲ್ಲಿ ನೀಡಿ ಪಾಸುಗಳನ್ನು ಪಡೆಯಬಹುದು ಎಂದು ಕರಾರಸಾಸಂ, ಮಂಗಳೂರು, ವಿಭಾಗೀಯ ನಿಯಂತ್ರಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…