ಗುಂಬಜ್ ಮಾದರಿ ಬಸ್‌ ನಿಲ್ದಾಣ | ಸಂಸದ ಪ್ರತಾಪ್‌ ಸಿಂಹ್‌ ಎಚ್ಚರಿಕೆ ಬೆನ್ನಲ್ಲೆ ಬದಲಾಯ್ತು ವಿನ್ಯಾಸ |

November 14, 2022
4:02 PM

ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು, ಟಿಪ್ಪು ಪ್ರತಿಮೆ, ಶಾಲೆಗಳಿಗೆ ಕೇಸರಿ ಬಣ್ಣ ವಿವಾದದ ಬೆನ್ನಲ್ಲೇ ಮೈಸೂರಿನಲ್ಲಿ  ಇನ್ನೊಂದು ವಿವಾದ ಸೃಷ್ಟಿಯಾಗುವ ಬೆನ್ನಲ್ಲೇ ಶಮನ ಮಾಡಲಾಗಿದೆ. ಮೈಸೂರಿನಲ್ಲಿ ಮಸೀದಿ ಮಾದರಿಯ ಬಸ್ ಶೆಲ್ಟರ್ ಗಳ ನಿರ್ಮಾಣ ಹೊಸದೊಂದು ವಿವಾದವನ್ನು ಹುಟ್ಟು ಹಾಕಿತ್ತು. ಇದಕ್ಕೆ ಹಲವೆಡೆಯಿಂದ ವಿರೋಧ ವ್ಯಕ್ತವಾಗಿತ್ತು. ಸಂಸದ ಪ್ರತಾಪ್‌ ಸಿಂಹ್‌ ಇಂತಹ ನಿಲ್ದಾಣಗಳನ್ನು ಒಡೆದು ಹಾಕುವುದಾಗಿ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಬಸ್‌ ಶೆಲ್ಟರ್‌ ವಿನ್ಯಾಸ ಬದಲಾಗಿದೆ. ಹೀಗಾಗಿ ವಿವಾದವೊಂದು ತಣ್ಣಗಾಗಿದೆ.

ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಹಲವೆಡೆಗಳಲ್ಲಿ ಮಸೀದಿ ಮಾದರಿಯ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಿಪ್ಪು ಪ್ರತಿಮೆ ನಿರ್ಮಾಣ ವಿಚಾರಗಳ ಬೆನ್ನಲ್ಲೇ ಈಗ ಇಂಥದ್ದೊಂದು ಬೆಳವಣಿಗೆಗಳು ನಡೆಯುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದರು.ಈ ಬೆನ್ನಲ್ಲೇ ರಾತ್ರೋ ರಾತ್ರಿ ಬಸ್ ಶೆಲ್ಟರ್ ಮಾದರಿ ಬದಲಾಗಿದೆ.ಇದೀಗ ಬಸ್ ಶೆಲ್ಟರ್ ಗುಂಬಜ್ ಮೇಲೆ ಕಳಶ ಪ್ರತಿಷ್ಠಾಪನೆ ಮಾಡಲಾಗಿದೆ. ಶಾಸಕ ಎಸ್​ಎ ರಾಮದಾಸ್ ಕ್ಷೇತ್ರ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಬಸ್​ ನಿಲ್ದಾಣದ ಶೆಲ್ಟರ್​ನಲ್ಲಿ ಮೂರು ಗುಂಬಜ್‌ಗಳ ಮೇಲೆ ಕಳಸ ಮಾದರಿಯ ಆಕೃತಿ ನಿರ್ಮಾಣ ಮಾಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror