Advertisement
Opinion

ಪ್ರಯಾಣಿಕರೇ ಹೀಗೊಂದು ಎಚ್ಚರ ನಮ್ಮದಾಗಿರಲಿ | ಪ್ರಯಾಣದ ಜಾಗೃತಿಯ ಬಗ್ಗೆ ಅನುಭವ |

Share

ನಿನ್ನೆ ರಾತ್ರಿ ಬೆಂಗಳೂರಿಂದ ಪುತ್ತೂರಿನ ನನ್ನ ಮನೆಗಾಗಿ ಬಸ್ಸು ಹತ್ತಿದೆ. ಹವಾ ನಿಯಂತ್ರಣವಿಲ್ಲದ ಮಲಗುವ ಬಸ್ಸಿನ ಮೇಲಂತಸ್ತಿನಲ್ಲಿ ನಾನು ಕುಳಿತಿದ್ದೆ. ನನ್ನ ಬಳಿಗೆ ಬಂದು ವ್ಯಕ್ತಿಯೊಬ್ಬ ಹಣ ಸಿಗಬಹುದೇ ಎಂದು ಕೇಳಿದ? ಅಕಾಲದಲ್ಲಿ ಅಪರಿಚಿತರೊಡನೆ ಯಾವುದೇ ವ್ಯವಹಾರ ತಪ್ಪು ಎಂಬ ಕಾರಣದಿಂದ ಇಲ್ಲವೆಂದು ಮುಗುಳ್ನಕ್ಕು ಸಾಗ ಹಾಕಿದೆ. ಅದಾಗಿ ಸ್ವಲ್ಪ ಹೊತ್ತಿನಲ್ಲಿ ಹೆಣ್ಣುಮಗಳೊಬ್ಬಳು ನಾನಿರುವ ಸೀಟಿನ ಕೆಳಬದಿಯಲ್ಲಿ ಆಚೀಚೆ ಬದಿಯಲ್ಲಿ ತನ್ನ ಚೀಲಕ್ಕಾಗಿ ತಡಕಾಡುವುದನ್ನು ಕಂಡೆ. ಇನ್ನೊಂದು ವ್ಯಕ್ತಿಯೊಡನೆ ಇಲ್ಲೇ ಇಟ್ಟಿದ್ದೆ, ಕಾಣದಾಗಿದೆ ಎಂದು ಅಲವತ್ತು ಕೊಳ್ಳುವುದನ್ನು ನೋಡಿ ಏನೆಂದು ವಿಚಾರಿಸಿದೆ.

Advertisement
Advertisement

ತಾನು ಮುಂದಾಗಿ ಕಾಯ್ದಿರಿಸಿದ ಸೀಟಿನಲ್ಲಿ ಬ್ಯಾಗನ್ನಿರಿಸಿ ಶೌಚಾಲಯಕ್ಕೆ ಗಮನಿಸಿದ್ದರಂತೆ. ಬಸ್ಸಿನೊಳಗೆ ಇನ್ನಿತರರು ಯಾರೂ ಬರಲಾರರು ಎಂಬ ನಂಬಿಕೆಯಿಂದ ಬ್ಯಾಗನ್ನಿರಿಸಿ ಹೋಗಿ ಬರುವಾಗ ಬ್ಯಾಗು ಕಾಣೆಯಾಗಿತ್ತು. ಕೇವಲ ಆಕೆಯದ್ದು ಮಾತ್ರವಲ್ಲ ಮುಂದಿನ ಸೀಟಿನಲ್ಲಿ ಇನ್ನೊಬ್ಬರು ಮಹನೀಯರದ್ದು ಬ್ಯಾಗು ತಷ್ಕರಣವಾಗಿತ್ತು. ಅವರ ಬಟ್ಟೆ ಬರೆಗಳ ವಿನಹ ಬೇರಿನ್ನೇನು ಇರಲಿಲ್ಲವಂತೆ. ಆದರೆ ಹೆಣ್ಣು ಮಗಳು ಕಳಕೊಂಡದ್ದು ಆಕೆಯ ಐಫೋನ್ ಕ್ರೆಡಿಟ್ಟು ಡೆಬಿಟ್ ಕಾರ್ಡ್ಗಳು, ಡ್ರೈವಿಂಗ್ ಲೈಸೆನ್ಸ್ ಗಳು, ವೃತ್ತಿ ಸಂಬಂಧಿ ದಾಖಲೆಗಳು ಇತ್ಯಾದಿ ಇತ್ಯಾದಿ.ಆಕೆಯ ಮುಖದಲ್ಲಿ ಕಂಡ ಹತಾಶೆ ನೋವು ಯಾರಿಗಾದರೂ ವೇದನೆಯನ್ನು ನೀಡಲೇಬೇಕು. ನನ್ನಲ್ಲಿ ಸಹಾಯ ಯಾಚಿಸಿದ ವ್ಯಕ್ತಿ ಹಿಂಬದಿಯಲ್ಲೂ ಇನ್ನೊಬ್ಬರಡನೆ ಇದೇ ಪ್ರಶ್ನೆಯನ್ನು ಕೇಳಿದ್ದನಂತೆ. ಆನಂತರ ಆ ವ್ಯಕ್ತಿಯನ್ನು ಯಾರೂ ಕಂಡಿಲ್ಲ.

ಸಹ ಪ್ರಯಾಣಿಕರ ಸಂಚಾರ ವಾಣಿಯ ಮುಖಾಂತರ , ಬಸ್ಸು ನಿರ್ವಾಹಕರ ಸಹಾಯದ ಮುಖಾಂತರ ಮುಂದಿನ ಇನ್ನಷ್ಟು ಅಪಾಯಗಳನ್ನು ಕಡಿಮೆ ಮಾಡುವ( ಕಾರ್ಡು ಬ್ಲಾಕಿಂಗ್ ಸಿಮ್ ಬ್ಲಾಕಿಂಗ್ ಇತ್ಯಾದಿ ಇತ್ಯಾದಿ ) ವ್ಯವಸ್ಥೆಯನ್ನು ಮಾಡಿಕೊಂಡು ಪ್ರಯಾಣವನ್ನು ಮುಂದುವರಿಸಿದರು.

ಯಾವುದೇ ವಾಹನದಲ್ಲಿ ಪ್ರಯಾಣಿಸುವವರು ತೆಗೆದುಕೊಳ್ಳಬೇಕಾದ ಅತ್ಯಂತ ಎಚ್ಚರಿಕೆ ಎಂದರೆ, ಅಪರಿಚಿತರನ್ನು ನಂಬಿದಂತೆ ಇದ್ದು ನಂಬದೇ ಇರ ಬೇಕಾದ್ದು. ಅಮೂಲ್ಯ ವಸ್ತುಗಳಿರುವ ಯಾವುದೇ ಚೀಲಗಳನ್ನು ಒಂಟಿಯಾಗಿ ಇರಿಸಿ ಹೋಗಬಾರದ್ದು. ದುಷ್ಟರು ನಮ್ಮ ಬೆನ್ನ ಹಿಂದೆಯೇ ಇದ್ದಾರೆ ಆದರೆ ನಮ್ಮ ಗಮನ ಅವರ ಮೇಲೆ ಹೋಗಿಲ್ಲ ಮಾತ್ರ ಎಂಬ ಸತ್ಯದ ಅರಿವು ಇರಬೇಕಾದದ್ದು.

ಬರಹ :
ಎ.ಪಿ. ಸದಾಶಿವ ಮರಿಕೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

3 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago