Advertisement
Opinion

ಪ್ರಯಾಣಿಕರೇ ಹೀಗೊಂದು ಎಚ್ಚರ ನಮ್ಮದಾಗಿರಲಿ | ಪ್ರಯಾಣದ ಜಾಗೃತಿಯ ಬಗ್ಗೆ ಅನುಭವ |

Share

ನಿನ್ನೆ ರಾತ್ರಿ ಬೆಂಗಳೂರಿಂದ ಪುತ್ತೂರಿನ ನನ್ನ ಮನೆಗಾಗಿ ಬಸ್ಸು ಹತ್ತಿದೆ. ಹವಾ ನಿಯಂತ್ರಣವಿಲ್ಲದ ಮಲಗುವ ಬಸ್ಸಿನ ಮೇಲಂತಸ್ತಿನಲ್ಲಿ ನಾನು ಕುಳಿತಿದ್ದೆ. ನನ್ನ ಬಳಿಗೆ ಬಂದು ವ್ಯಕ್ತಿಯೊಬ್ಬ ಹಣ ಸಿಗಬಹುದೇ ಎಂದು ಕೇಳಿದ? ಅಕಾಲದಲ್ಲಿ ಅಪರಿಚಿತರೊಡನೆ ಯಾವುದೇ ವ್ಯವಹಾರ ತಪ್ಪು ಎಂಬ ಕಾರಣದಿಂದ ಇಲ್ಲವೆಂದು ಮುಗುಳ್ನಕ್ಕು ಸಾಗ ಹಾಕಿದೆ. ಅದಾಗಿ ಸ್ವಲ್ಪ ಹೊತ್ತಿನಲ್ಲಿ ಹೆಣ್ಣುಮಗಳೊಬ್ಬಳು ನಾನಿರುವ ಸೀಟಿನ ಕೆಳಬದಿಯಲ್ಲಿ ಆಚೀಚೆ ಬದಿಯಲ್ಲಿ ತನ್ನ ಚೀಲಕ್ಕಾಗಿ ತಡಕಾಡುವುದನ್ನು ಕಂಡೆ. ಇನ್ನೊಂದು ವ್ಯಕ್ತಿಯೊಡನೆ ಇಲ್ಲೇ ಇಟ್ಟಿದ್ದೆ, ಕಾಣದಾಗಿದೆ ಎಂದು ಅಲವತ್ತು ಕೊಳ್ಳುವುದನ್ನು ನೋಡಿ ಏನೆಂದು ವಿಚಾರಿಸಿದೆ.

ತಾನು ಮುಂದಾಗಿ ಕಾಯ್ದಿರಿಸಿದ ಸೀಟಿನಲ್ಲಿ ಬ್ಯಾಗನ್ನಿರಿಸಿ ಶೌಚಾಲಯಕ್ಕೆ ಗಮನಿಸಿದ್ದರಂತೆ. ಬಸ್ಸಿನೊಳಗೆ ಇನ್ನಿತರರು ಯಾರೂ ಬರಲಾರರು ಎಂಬ ನಂಬಿಕೆಯಿಂದ ಬ್ಯಾಗನ್ನಿರಿಸಿ ಹೋಗಿ ಬರುವಾಗ ಬ್ಯಾಗು ಕಾಣೆಯಾಗಿತ್ತು. ಕೇವಲ ಆಕೆಯದ್ದು ಮಾತ್ರವಲ್ಲ ಮುಂದಿನ ಸೀಟಿನಲ್ಲಿ ಇನ್ನೊಬ್ಬರು ಮಹನೀಯರದ್ದು ಬ್ಯಾಗು ತಷ್ಕರಣವಾಗಿತ್ತು. ಅವರ ಬಟ್ಟೆ ಬರೆಗಳ ವಿನಹ ಬೇರಿನ್ನೇನು ಇರಲಿಲ್ಲವಂತೆ. ಆದರೆ ಹೆಣ್ಣು ಮಗಳು ಕಳಕೊಂಡದ್ದು ಆಕೆಯ ಐಫೋನ್ ಕ್ರೆಡಿಟ್ಟು ಡೆಬಿಟ್ ಕಾರ್ಡ್ಗಳು, ಡ್ರೈವಿಂಗ್ ಲೈಸೆನ್ಸ್ ಗಳು, ವೃತ್ತಿ ಸಂಬಂಧಿ ದಾಖಲೆಗಳು ಇತ್ಯಾದಿ ಇತ್ಯಾದಿ.ಆಕೆಯ ಮುಖದಲ್ಲಿ ಕಂಡ ಹತಾಶೆ ನೋವು ಯಾರಿಗಾದರೂ ವೇದನೆಯನ್ನು ನೀಡಲೇಬೇಕು. ನನ್ನಲ್ಲಿ ಸಹಾಯ ಯಾಚಿಸಿದ ವ್ಯಕ್ತಿ ಹಿಂಬದಿಯಲ್ಲೂ ಇನ್ನೊಬ್ಬರಡನೆ ಇದೇ ಪ್ರಶ್ನೆಯನ್ನು ಕೇಳಿದ್ದನಂತೆ. ಆನಂತರ ಆ ವ್ಯಕ್ತಿಯನ್ನು ಯಾರೂ ಕಂಡಿಲ್ಲ.

ಸಹ ಪ್ರಯಾಣಿಕರ ಸಂಚಾರ ವಾಣಿಯ ಮುಖಾಂತರ , ಬಸ್ಸು ನಿರ್ವಾಹಕರ ಸಹಾಯದ ಮುಖಾಂತರ ಮುಂದಿನ ಇನ್ನಷ್ಟು ಅಪಾಯಗಳನ್ನು ಕಡಿಮೆ ಮಾಡುವ( ಕಾರ್ಡು ಬ್ಲಾಕಿಂಗ್ ಸಿಮ್ ಬ್ಲಾಕಿಂಗ್ ಇತ್ಯಾದಿ ಇತ್ಯಾದಿ ) ವ್ಯವಸ್ಥೆಯನ್ನು ಮಾಡಿಕೊಂಡು ಪ್ರಯಾಣವನ್ನು ಮುಂದುವರಿಸಿದರು.

ಯಾವುದೇ ವಾಹನದಲ್ಲಿ ಪ್ರಯಾಣಿಸುವವರು ತೆಗೆದುಕೊಳ್ಳಬೇಕಾದ ಅತ್ಯಂತ ಎಚ್ಚರಿಕೆ ಎಂದರೆ, ಅಪರಿಚಿತರನ್ನು ನಂಬಿದಂತೆ ಇದ್ದು ನಂಬದೇ ಇರ ಬೇಕಾದ್ದು. ಅಮೂಲ್ಯ ವಸ್ತುಗಳಿರುವ ಯಾವುದೇ ಚೀಲಗಳನ್ನು ಒಂಟಿಯಾಗಿ ಇರಿಸಿ ಹೋಗಬಾರದ್ದು. ದುಷ್ಟರು ನಮ್ಮ ಬೆನ್ನ ಹಿಂದೆಯೇ ಇದ್ದಾರೆ ಆದರೆ ನಮ್ಮ ಗಮನ ಅವರ ಮೇಲೆ ಹೋಗಿಲ್ಲ ಮಾತ್ರ ಎಂಬ ಸತ್ಯದ ಅರಿವು ಇರಬೇಕಾದದ್ದು.

ಬರಹ :
ಎ.ಪಿ. ಸದಾಶಿವ ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹5 ಕೂಲಿಯಿಂದ ₹15 ಕೋಟಿ ಕೃಷಿ ಉದ್ಯಮದವರೆಗೆ…! ಈಗ ಆಕ್ಸ್‌ಫರ್ಡ್‌ AI ಸಮ್ಮೇಳನದಲ್ಲಿ ಭಾರತೀಯ ರೈತನ ಭಾಷಣ..!

₹5 ಕೂಲಿಯಿಂದ ಆರಂಭಿಸಿದ ರೈತ ಈಗ ಆಕ್ಸ್‌ಫರ್ಡ್‌ AI ಸಮ್ಮೇಳನದ ವೇದಿಕೆಗೆ. ಪೌಲ್ಟ್ರಿ…

4 hours ago

ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ

ಆಲಿಕಲ್ಲು ಮಳೆಯಂತಹ ತೀವ್ರ ಹವಾಮಾನದಿಂದ ಬೆಳೆ ರಕ್ಷಿಸಲು ಆಂಟಿ-ಹೈಲ್ ನೆಟ್‌ ಪ್ರಮುಖ ತಂತ್ರಜ್ಞಾನವಾಗಿ…

5 hours ago

ಮಾರ್ಚ್‌ನಲ್ಲಿ ಹವಾಮಾನ ತಿರುವು | 25 ರಾಜ್ಯಗಳಿಗೆ ಮಳೆ-ಗುಡುಗು ಎಚ್ಚರಿಕೆ, ಗಾಳಿಯೂ ಸಾಧ್ಯತೆ..!

ದೇಶಾದ್ಯಂತ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದ್ದು, ಅನೇಕ ರಾಜ್ಯಗಳಲ್ಲಿ ಮಳೆ, ಗುಡುಗು ಹಾಗೂ…

5 hours ago

ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?

ರಾಜ್ಯದಲ್ಲಿ ಸಧ್ಯಕ್ಕೆ ಮಳೆ ಕಡಿಮೆಯಾಗಿದ್ದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದೆ. ಇಂದು…

13 hours ago

ಅಡಿಕೆ ಮಾರುಕಟ್ಟೆ | ಗುಣಮಟ್ಟದ ಅಡಿಕೆಗೆ ಬೇಡಿಕೆ….!

ಉತ್ತಮ ಗುಣಮಟ್ಟದ ಅಡಿಕೆಗಳಿಗೆ ₹530 ದರ ಸ್ಥಿರವಾಗಿದ್ದು ಹೊಸ ಅಡಿಕೆಗೆ ಸ್ಪಷ್ಟ ಬೇಡಿಕೆ…

14 hours ago

ಕಾಳುಮೆಣಸು ಕೃಷಿಯಲ್ಲಿ ಟೆಕ್ ಕ್ರಾಂತಿ | ಟಿಶ್ಯೂ ಕಲ್ಚರ್‌ ವಿಧಾನದಿಂದ ಇಳುವರಿ ಹೆಚ್ಚಳ – ಕೃಷಿ ಸಚಿವರ ಭೇಟಿ

ಹೊಸ ತಂತ್ರಜ್ಞಾನಗಳಿಂದ ಕಾಳುಮೆಣಸು ಕೃಷಿಯಲ್ಲಿ ಇಳುವರಿ ಮೂರು ಪಟ್ಟು ಹೆಚ್ಚಾಗುವ ಸಾಧ್ಯತೆ ಕಂಡುಬಂದಿದ್ದು,…

18 hours ago