Advertisement
Opinion

ಪ್ರಯಾಣಿಕರೇ ಹೀಗೊಂದು ಎಚ್ಚರ ನಮ್ಮದಾಗಿರಲಿ | ಪ್ರಯಾಣದ ಜಾಗೃತಿಯ ಬಗ್ಗೆ ಅನುಭವ |

Share

ನಿನ್ನೆ ರಾತ್ರಿ ಬೆಂಗಳೂರಿಂದ ಪುತ್ತೂರಿನ ನನ್ನ ಮನೆಗಾಗಿ ಬಸ್ಸು ಹತ್ತಿದೆ. ಹವಾ ನಿಯಂತ್ರಣವಿಲ್ಲದ ಮಲಗುವ ಬಸ್ಸಿನ ಮೇಲಂತಸ್ತಿನಲ್ಲಿ ನಾನು ಕುಳಿತಿದ್ದೆ. ನನ್ನ ಬಳಿಗೆ ಬಂದು ವ್ಯಕ್ತಿಯೊಬ್ಬ ಹಣ ಸಿಗಬಹುದೇ ಎಂದು ಕೇಳಿದ? ಅಕಾಲದಲ್ಲಿ ಅಪರಿಚಿತರೊಡನೆ ಯಾವುದೇ ವ್ಯವಹಾರ ತಪ್ಪು ಎಂಬ ಕಾರಣದಿಂದ ಇಲ್ಲವೆಂದು ಮುಗುಳ್ನಕ್ಕು ಸಾಗ ಹಾಕಿದೆ. ಅದಾಗಿ ಸ್ವಲ್ಪ ಹೊತ್ತಿನಲ್ಲಿ ಹೆಣ್ಣುಮಗಳೊಬ್ಬಳು ನಾನಿರುವ ಸೀಟಿನ ಕೆಳಬದಿಯಲ್ಲಿ ಆಚೀಚೆ ಬದಿಯಲ್ಲಿ ತನ್ನ ಚೀಲಕ್ಕಾಗಿ ತಡಕಾಡುವುದನ್ನು ಕಂಡೆ. ಇನ್ನೊಂದು ವ್ಯಕ್ತಿಯೊಡನೆ ಇಲ್ಲೇ ಇಟ್ಟಿದ್ದೆ, ಕಾಣದಾಗಿದೆ ಎಂದು ಅಲವತ್ತು ಕೊಳ್ಳುವುದನ್ನು ನೋಡಿ ಏನೆಂದು ವಿಚಾರಿಸಿದೆ.

ತಾನು ಮುಂದಾಗಿ ಕಾಯ್ದಿರಿಸಿದ ಸೀಟಿನಲ್ಲಿ ಬ್ಯಾಗನ್ನಿರಿಸಿ ಶೌಚಾಲಯಕ್ಕೆ ಗಮನಿಸಿದ್ದರಂತೆ. ಬಸ್ಸಿನೊಳಗೆ ಇನ್ನಿತರರು ಯಾರೂ ಬರಲಾರರು ಎಂಬ ನಂಬಿಕೆಯಿಂದ ಬ್ಯಾಗನ್ನಿರಿಸಿ ಹೋಗಿ ಬರುವಾಗ ಬ್ಯಾಗು ಕಾಣೆಯಾಗಿತ್ತು. ಕೇವಲ ಆಕೆಯದ್ದು ಮಾತ್ರವಲ್ಲ ಮುಂದಿನ ಸೀಟಿನಲ್ಲಿ ಇನ್ನೊಬ್ಬರು ಮಹನೀಯರದ್ದು ಬ್ಯಾಗು ತಷ್ಕರಣವಾಗಿತ್ತು. ಅವರ ಬಟ್ಟೆ ಬರೆಗಳ ವಿನಹ ಬೇರಿನ್ನೇನು ಇರಲಿಲ್ಲವಂತೆ. ಆದರೆ ಹೆಣ್ಣು ಮಗಳು ಕಳಕೊಂಡದ್ದು ಆಕೆಯ ಐಫೋನ್ ಕ್ರೆಡಿಟ್ಟು ಡೆಬಿಟ್ ಕಾರ್ಡ್ಗಳು, ಡ್ರೈವಿಂಗ್ ಲೈಸೆನ್ಸ್ ಗಳು, ವೃತ್ತಿ ಸಂಬಂಧಿ ದಾಖಲೆಗಳು ಇತ್ಯಾದಿ ಇತ್ಯಾದಿ.ಆಕೆಯ ಮುಖದಲ್ಲಿ ಕಂಡ ಹತಾಶೆ ನೋವು ಯಾರಿಗಾದರೂ ವೇದನೆಯನ್ನು ನೀಡಲೇಬೇಕು. ನನ್ನಲ್ಲಿ ಸಹಾಯ ಯಾಚಿಸಿದ ವ್ಯಕ್ತಿ ಹಿಂಬದಿಯಲ್ಲೂ ಇನ್ನೊಬ್ಬರಡನೆ ಇದೇ ಪ್ರಶ್ನೆಯನ್ನು ಕೇಳಿದ್ದನಂತೆ. ಆನಂತರ ಆ ವ್ಯಕ್ತಿಯನ್ನು ಯಾರೂ ಕಂಡಿಲ್ಲ.

ಸಹ ಪ್ರಯಾಣಿಕರ ಸಂಚಾರ ವಾಣಿಯ ಮುಖಾಂತರ , ಬಸ್ಸು ನಿರ್ವಾಹಕರ ಸಹಾಯದ ಮುಖಾಂತರ ಮುಂದಿನ ಇನ್ನಷ್ಟು ಅಪಾಯಗಳನ್ನು ಕಡಿಮೆ ಮಾಡುವ( ಕಾರ್ಡು ಬ್ಲಾಕಿಂಗ್ ಸಿಮ್ ಬ್ಲಾಕಿಂಗ್ ಇತ್ಯಾದಿ ಇತ್ಯಾದಿ ) ವ್ಯವಸ್ಥೆಯನ್ನು ಮಾಡಿಕೊಂಡು ಪ್ರಯಾಣವನ್ನು ಮುಂದುವರಿಸಿದರು.

ಯಾವುದೇ ವಾಹನದಲ್ಲಿ ಪ್ರಯಾಣಿಸುವವರು ತೆಗೆದುಕೊಳ್ಳಬೇಕಾದ ಅತ್ಯಂತ ಎಚ್ಚರಿಕೆ ಎಂದರೆ, ಅಪರಿಚಿತರನ್ನು ನಂಬಿದಂತೆ ಇದ್ದು ನಂಬದೇ ಇರ ಬೇಕಾದ್ದು. ಅಮೂಲ್ಯ ವಸ್ತುಗಳಿರುವ ಯಾವುದೇ ಚೀಲಗಳನ್ನು ಒಂಟಿಯಾಗಿ ಇರಿಸಿ ಹೋಗಬಾರದ್ದು. ದುಷ್ಟರು ನಮ್ಮ ಬೆನ್ನ ಹಿಂದೆಯೇ ಇದ್ದಾರೆ ಆದರೆ ನಮ್ಮ ಗಮನ ಅವರ ಮೇಲೆ ಹೋಗಿಲ್ಲ ಮಾತ್ರ ಎಂಬ ಸತ್ಯದ ಅರಿವು ಇರಬೇಕಾದದ್ದು.

ಬರಹ :
ಎ.ಪಿ. ಸದಾಶಿವ ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 hour ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

11 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

16 hours ago