ಹಣಕಾಸಿನ ಅಡೆತಡೆಗಳನ್ನು ಎದುರಿಸುತ್ತಿರುವ ಜಾರ್ಖಂಡ್ನ ಹಜಾರಿಬಾಗ್ನ ಮುಕಿ ಗ್ರಾಮದ ರೈತ ತನ್ನ ಹಾನಿಗೊಳಗಾದ ನೀರಿನ ಪಂಪ್ ಅನ್ನು ಪೆಡಲ್ ಪವರ್ನಲ್ಲಿ ಚಲಾಯಿಸುವ ಮೂಲಕ ಯಶಸ್ವಿಯಾಗಿದ್ದಾರೆ. ವಿದ್ಯುಚ್ಛಕ್ತಿ ಮತ್ತು ಇಂಧನದಿಂದ ಚಲಿಸುವ ಸಾಂಪ್ರದಾಯಿಕ ಪಂಪ್ ಅನ್ನು ಹಳೆಯ ಬೈ-ಸೈಕಲ್ ಅನ್ನು ಪೆಡಲ್ ಮಾಡುವುದರೊಂದಿಗೆ ತನ್ನ ಬೆಳೆಗಳಿಗೆ ನೀರುಣಿಸುವಂತೆ ಮಾಡಿದ್ದಾರೆ.
ಪಂಪ್ನ ಕಾಯಿಲ್ ಸುಟ್ಟ ನಂತರ ಬೆಳೆಗಳಿಗೆ ನೀರು ಹಾಕಲು ಸಾಧ್ಯವಾಗದ ಕಾರಣ ಈ ಪ್ರಯೋಗವನ್ನು ಮಾಡಿರುವೆನು ಎಂದು ರೈತ ಮಾಂಝಿ ಹೇಳಿದ್ದಾರೆ. ಆರ್ಥಿಕ ಅಡಚಣೆ ಮತ್ತು ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಅದನ್ನು ಮತ್ತೆ ಸರಿಪಡಿಸಲು ಸಾಧ್ಯವಾಗಲಿಲ್ಲ. ಮರುದಿನ ನನ್ನ ಹಿತ್ತಲಿನಲ್ಲಿ ಬಿದ್ದಿರುವ ಹಳೆಯ ಬೈಸಿಕಲ್ಲೊಂದಿಗೆ ಪಂಪ್ ಅನ್ನು ಚಾಲೂಗೊಳಿಸುವ ಏಕೆ ಸಾಧ್ಯವಿಲ್ಲ ಎಂದು ಪ್ರಯತ್ನಿಸಿದೆ. ಹೀಗಾಗಿ ನಾನು ಪಂಪ್ನಿಂದ ಮೋಟಾರ್ ಫ್ಯಾನ್ ಅನ್ನು ತೆಗೆದು ಅದರ ಬುಷ್ ಅನ್ನು ಸರಪಳಿಯ ಸಹಾಯದಿಂದ ಫ್ರೀ-ವೀಲ್ ಮೂಲಕ ಬೈಸಿಕಲ್ ವೀಲ್ನೊಂದಿಗೆ ಸಿಕ್ಕಿಸಿ ಯಶಸ್ವಿಯಾದೆ ಎಂದು ಮಾಂಝಿ ಹೇಳಿದರು.
ಕೃಷಿಕ ಮಾಂಝಿ ಈಗ ತನ್ನ 2.5 ಎಕರೆ ಜಮೀನಿನಲ್ಲಿ ತನ್ನ ತರಕಾರಿ ಬೆಳೆಗಳಿಗೆ ಒಂದು ರೂಪಾಯಿ ಹೂಡಿಕೆ ಮಾಡದೆ ಹತ್ತಿರದ ಕೊಳದಿಂದ ಸಮರ್ಥವಾಗಿ ಈ ಪಂಪ್ ಬಳಸಿ ನೀರಾವರಿ ಮಾಡುತ್ತಾನೆ ಎಂದು ಅವರು ಹೇಳಿದರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…