ಹಣಕಾಸಿನ ಅಡೆತಡೆಗಳನ್ನು ಎದುರಿಸುತ್ತಿರುವ ಜಾರ್ಖಂಡ್ನ ಹಜಾರಿಬಾಗ್ನ ಮುಕಿ ಗ್ರಾಮದ ರೈತ ತನ್ನ ಹಾನಿಗೊಳಗಾದ ನೀರಿನ ಪಂಪ್ ಅನ್ನು ಪೆಡಲ್ ಪವರ್ನಲ್ಲಿ ಚಲಾಯಿಸುವ ಮೂಲಕ ಯಶಸ್ವಿಯಾಗಿದ್ದಾರೆ. ವಿದ್ಯುಚ್ಛಕ್ತಿ ಮತ್ತು ಇಂಧನದಿಂದ ಚಲಿಸುವ ಸಾಂಪ್ರದಾಯಿಕ ಪಂಪ್ ಅನ್ನು ಹಳೆಯ ಬೈ-ಸೈಕಲ್ ಅನ್ನು ಪೆಡಲ್ ಮಾಡುವುದರೊಂದಿಗೆ ತನ್ನ ಬೆಳೆಗಳಿಗೆ ನೀರುಣಿಸುವಂತೆ ಮಾಡಿದ್ದಾರೆ.
ಪಂಪ್ನ ಕಾಯಿಲ್ ಸುಟ್ಟ ನಂತರ ಬೆಳೆಗಳಿಗೆ ನೀರು ಹಾಕಲು ಸಾಧ್ಯವಾಗದ ಕಾರಣ ಈ ಪ್ರಯೋಗವನ್ನು ಮಾಡಿರುವೆನು ಎಂದು ರೈತ ಮಾಂಝಿ ಹೇಳಿದ್ದಾರೆ. ಆರ್ಥಿಕ ಅಡಚಣೆ ಮತ್ತು ವಿದ್ಯುತ್ ಪೂರೈಕೆಯ ಕೊರತೆಯಿಂದಾಗಿ ಅದನ್ನು ಮತ್ತೆ ಸರಿಪಡಿಸಲು ಸಾಧ್ಯವಾಗಲಿಲ್ಲ. ಮರುದಿನ ನನ್ನ ಹಿತ್ತಲಿನಲ್ಲಿ ಬಿದ್ದಿರುವ ಹಳೆಯ ಬೈಸಿಕಲ್ಲೊಂದಿಗೆ ಪಂಪ್ ಅನ್ನು ಚಾಲೂಗೊಳಿಸುವ ಏಕೆ ಸಾಧ್ಯವಿಲ್ಲ ಎಂದು ಪ್ರಯತ್ನಿಸಿದೆ. ಹೀಗಾಗಿ ನಾನು ಪಂಪ್ನಿಂದ ಮೋಟಾರ್ ಫ್ಯಾನ್ ಅನ್ನು ತೆಗೆದು ಅದರ ಬುಷ್ ಅನ್ನು ಸರಪಳಿಯ ಸಹಾಯದಿಂದ ಫ್ರೀ-ವೀಲ್ ಮೂಲಕ ಬೈಸಿಕಲ್ ವೀಲ್ನೊಂದಿಗೆ ಸಿಕ್ಕಿಸಿ ಯಶಸ್ವಿಯಾದೆ ಎಂದು ಮಾಂಝಿ ಹೇಳಿದರು.
ಕೃಷಿಕ ಮಾಂಝಿ ಈಗ ತನ್ನ 2.5 ಎಕರೆ ಜಮೀನಿನಲ್ಲಿ ತನ್ನ ತರಕಾರಿ ಬೆಳೆಗಳಿಗೆ ಒಂದು ರೂಪಾಯಿ ಹೂಡಿಕೆ ಮಾಡದೆ ಹತ್ತಿರದ ಕೊಳದಿಂದ ಸಮರ್ಥವಾಗಿ ಈ ಪಂಪ್ ಬಳಸಿ ನೀರಾವರಿ ಮಾಡುತ್ತಾನೆ ಎಂದು ಅವರು ಹೇಳಿದರು.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…