ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು.ಸಭೆ ಬಳಿಕ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಒಟ್ಟು 56 ವಿಷಯಗಳ 12 ಸಾವಿರದ 692 ಕೋಟಿ ರೂಪಾಯಿ ಮೊತ್ತದ ಯೋಜನೆಗಳಲ್ಲಿ 11 ಸಾವಿರದ 770 ಕೋಟಿ ರೂಪಾಯಿ ಮೊತ್ತದ 46 ವಿಷಯಗಳು ಕಲ್ಯಾಣ ಕರ್ನಾಟಕಕ್ಕೆ ಸೀಮಿತವಾಗಿವೆ ಎಂದರು.
ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೆಗೇರಿಸುವುದು. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಎಲ್ಲಾ ಹಳ್ಳಿಗಳಿಗೆ 7 ಸಾವಿರದ 200 ಕೋಟಿ ರೂಪಾಯಿ ಮೊತ್ತದಲ್ಲಿ, ನಾರಾಯಣಪುರ ಜಲಾಶಯದಿಂದ ಶುದ್ಧ ಕುಡಿಯುವ ನೀರು ಒದಗಿಸಲು ಸಚಿವ ಸಂಪುಟ ಸಮ್ಮತಿ ನೀಡಿದೆ. ಇದರಲ್ಲಿ ರಾಜ್ಯ ಹಾಗೂ ಕೇಂದ್ರದ ಸರ್ಕಾರದ ಪಾಲು ತಲಾ 50ರಷ್ಟು ಇರಲಿದೆ ಎಂದು ಹೇಳಿದರು.ಕಲ್ಯಾಣ ಕರ್ನಾಟಕಕ್ಕೆ ಪ್ರತಿವರ್ಷ ರಾಜ್ಯ ಸರ್ಕಾರ 5 ಸಾವಿರ ಕೋಟಿ ರೂಪಾಯಿ ಅನುದಾನ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 17 ಸಾವಿರ 439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ತೆಗೆದುಕೊಂಡಿದೆ.
20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಭೂತಾನ್ನಿಂದ 17,000 ಟನ್ಗಳಷ್ಟು ಹಸಿ ಅಡಿಕೆಯನ್ನು ವಾರ್ಷಿಕವಾಗಿ ಆಮದು ಮಾಡಿಕೊಳ್ಳಲು ಸರ್ಕಾರವು 2022…
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…
ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ…
ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…