ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು.ಸಭೆ ಬಳಿಕ ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಒಟ್ಟು 56 ವಿಷಯಗಳ 12 ಸಾವಿರದ 692 ಕೋಟಿ ರೂಪಾಯಿ ಮೊತ್ತದ ಯೋಜನೆಗಳಲ್ಲಿ 11 ಸಾವಿರದ 770 ಕೋಟಿ ರೂಪಾಯಿ ಮೊತ್ತದ 46 ವಿಷಯಗಳು ಕಲ್ಯಾಣ ಕರ್ನಾಟಕಕ್ಕೆ ಸೀಮಿತವಾಗಿವೆ ಎಂದರು.
ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಗಳನ್ನಾಗಿ ಮೇಲ್ದರ್ಜೆಗೇರಿಸುವುದು. ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಎಲ್ಲಾ ಹಳ್ಳಿಗಳಿಗೆ 7 ಸಾವಿರದ 200 ಕೋಟಿ ರೂಪಾಯಿ ಮೊತ್ತದಲ್ಲಿ, ನಾರಾಯಣಪುರ ಜಲಾಶಯದಿಂದ ಶುದ್ಧ ಕುಡಿಯುವ ನೀರು ಒದಗಿಸಲು ಸಚಿವ ಸಂಪುಟ ಸಮ್ಮತಿ ನೀಡಿದೆ. ಇದರಲ್ಲಿ ರಾಜ್ಯ ಹಾಗೂ ಕೇಂದ್ರದ ಸರ್ಕಾರದ ಪಾಲು ತಲಾ 50ರಷ್ಟು ಇರಲಿದೆ ಎಂದು ಹೇಳಿದರು.ಕಲ್ಯಾಣ ಕರ್ನಾಟಕಕ್ಕೆ ಪ್ರತಿವರ್ಷ ರಾಜ್ಯ ಸರ್ಕಾರ 5 ಸಾವಿರ ಕೋಟಿ ರೂಪಾಯಿ ಅನುದಾನ ನೀಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 17 ಸಾವಿರ 439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ತೆಗೆದುಕೊಂಡಿದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…