ವ್ಯಾಟ್ಸಪ್ ಮೂಲಕ ಮೆಸೇಜು ಬೇರೆ ಬೇರೆ ಗುಂಪುಗಳಲ್ಲಿ ಬರುತ್ತಿದೆ.ಆ ಸಂದೇಶ ಹೀಗೆ ಇದೆ…. ಇದು ಸರ್ಕಾರದ ಹೊಸ ಯೋಜನೆ. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. “Blood On Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/. ಈ ಯೋಜನೆಯನ್ನು ಪ್ರಧಾನಿ ಮೋದಿಯವರು ಆರಂಭಿಸಿದ್ದಾರೆ ಎಂಬ ಸಂದೇಶ ವಾಟ್ಸಾಪ್ನಲ್ಲಿ ವೈರಲ್ ಆಗಿದೆ. ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವರ್ಡ್ ಮಾಡಿ. ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು. ಅದು ಸುಳ್ಳು. ಅವರು ಪ್ರಧಾನಿಯಾಗುವ ಮೊದಲು ಮಹಾರಾಷ್ಟ್ರದಲ್ಲಿ ಈ ಯೋಜನೆ ಪ್ರಾರಂಭಿಸಲಾಗಿತ್ತು.
ವಾಸ್ತವವಾಗಿ ದೇಶದಲ್ಲಿ ಇಂತಹ ಯೋಜನೆ ಇಲ್ಲ. ಮಹಾರಾಷ್ಟ್ರದಲ್ಲಿ 2014 ರಲ್ಲಿ ಆಗಿನ ಆರೋಗ್ಯ ಸಚಿವರು ಅಲ್ಲಿನ ಯೋಜನೆಯನ್ನು ಹೇಳಿದ್ದರು. ಈಗ ದೇಶದ ವಿವಿಧ ಕಡೆ 104 ಸಂಖ್ಯೆಯನ್ನು ಬೇರೆ ಬೇರೆ ಸೇವೆಗೆ ಬಳಸಲಾಗುತ್ತಿದೆ. ವಿಶೇಷವಾಗಿ ಕೋವಿಡ್ ಸೇವೆಗೆ ಬಳಕೆ ಮಾಡಲಾಗುತ್ತಿತ್ತು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…