ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

November 24, 2025
9:55 PM

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್‍ವೆಲ್ ಕೊರೆಯಿಸುವುದು, ಪಂಪ್‍ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.

ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು.  ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:

  •  ಆಧಾರ್ ಕಾರ್ಡ್ ಪ್ರತಿ
  • ಕ್ರಿಶ್ಚಿಯನ್ ಸಮುದಾಯದ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  •  ಸಣ್ಣ/ಅತಿ ಸಣ್ಣ ರೈತ ಪ್ರಮಾಣಪತ್ರ
  •  ಇತ್ತೀಚಿನ ಆರ್‍ಟಿಸಿ ಪ್ರತಿ
  •  ಭೂ ಕಂದಾಯ ರಸೀದಿ
  •  ಪಾಸ್‍ಪೋರ್ಟ್ ಗಾತ್ರದ ಫೋಟೋ
  •  ಸ್ವಯಂ ಫೋಷಣಾ ಪತ್ರ
  •  ಬ್ಯಾಂಕ್ ಪಾಸ್‍ಬುಕ್

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:   ಆಯಾ ಜಿಲ್ಲೆಯ ಕೆಎಮ್‍ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್‍ಲೈನ್ ವ್ಯವಸ್ಥೆಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror