ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್ವೆಲ್ ಕೊರೆಯಿಸುವುದು, ಪಂಪ್ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.
ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು. ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:
ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: ಆಯಾ ಜಿಲ್ಲೆಯ ಕೆಎಮ್ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್ಲೈನ್ ವ್ಯವಸ್ಥೆಗಳಿಲ್ಲ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…