Advertisement
ಸುದ್ದಿಗಳು

ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Share

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್‍ವೆಲ್ ಕೊರೆಯಿಸುವುದು, ಪಂಪ್‍ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.

ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು.  ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್ ಪ್ರತಿ
  • ಕ್ರಿಶ್ಚಿಯನ್ ಸಮುದಾಯದ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ಸಣ್ಣ/ಅತಿ ಸಣ್ಣ ರೈತ ಪ್ರಮಾಣಪತ್ರ
  • ಇತ್ತೀಚಿನ ಆರ್‍ಟಿಸಿ ಪ್ರತಿ
  • ಭೂ ಕಂದಾಯ ರಸೀದಿ
  • ಪಾಸ್‍ಪೋರ್ಟ್ ಗಾತ್ರದ ಫೋಟೋ
  • ಸ್ವಯಂ ಫೋಷಣಾ ಪತ್ರ
  • ಬ್ಯಾಂಕ್ ಪಾಸ್‍ಬುಕ್

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:   ಆಯಾ ಜಿಲ್ಲೆಯ ಕೆಎಮ್‍ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್‍ಲೈನ್ ವ್ಯವಸ್ಥೆಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

4 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

11 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

20 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

20 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

22 hours ago