ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್ವೆಲ್ ಕೊರೆಯಿಸುವುದು, ಪಂಪ್ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.
ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು. ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:
ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: ಆಯಾ ಜಿಲ್ಲೆಯ ಕೆಎಮ್ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್ಲೈನ್ ವ್ಯವಸ್ಥೆಗಳಿಲ್ಲ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…