ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್ವೆಲ್ ಕೊರೆಯಿಸುವುದು, ಪಂಪ್ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.
ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು. ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:
ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: ಆಯಾ ಜಿಲ್ಲೆಯ ಕೆಎಮ್ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್ಲೈನ್ ವ್ಯವಸ್ಥೆಗಳಿಲ್ಲ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…