ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್ವೆಲ್ ಕೊರೆಯಿಸುವುದು, ಪಂಪ್ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.
ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು. ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:
ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: ಆಯಾ ಜಿಲ್ಲೆಯ ಕೆಎಮ್ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್ಲೈನ್ ವ್ಯವಸ್ಥೆಗಳಿಲ್ಲ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…