Advertisement
ಸುದ್ದಿಗಳು

ಗಂಗಾ ಕಲ್ಯಾಣ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

Share

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮ ನಡೆಸುತ್ತಿರುವ ಗಂಗಾ ಕಲ್ಯಾಣ ಯೋಜನೆಯ ಸಂಪೂರ್ಣ ಸಹಾಯಧನವನ್ನು ಈ ಬಾರಿ ಕ್ರಿಶ್ಚಿಯನ್ ರೈತರಿಗೆ ನೀಡಲಾಗುತ್ತದೆ. ಈ ಯೋಜನೆಯಲ್ಲಿ ಬೋರ್‍ವೆಲ್ ಕೊರೆಯಿಸುವುದು, ಪಂಪ್‍ಸೆಟ್ ಅಳವಡಿಸುವುದು ಮತ್ತು ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ.

ಈ ಯೋಜನೆಯನ್ನು ಜಿಲ್ಲೆಗಳಿಗೆ ಅನುಸಾರವಾಗಿ ಸಹಾಯಧನವನ್ನು ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿ ರೂ 4 ಲಕ್ಷ ಹಾಗೂ ಉಳಿದ ಎಲ್ಲ ಜಿಲ್ಲೆಗಳಿ ರೂ 3 ಲಕ್ಷ ನೀಡಲಾಗುತ್ತದೆ. ಈ ಯೋಜನೆಯನ್ನು ಪಡೆಯುವ ಪ್ರತಿಯೊಬ್ಬ ರೈತನ ಕುಟುಂಬದ ವಾರ್ಷಿಕ ಆದಾಯ ರೂ 6 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಾಗೂ ಸ್ವಂತ ಜಮೀನುವನ್ನು ಹೊಂದಿರಬೇಕು. ಅಂದರೆ, ಸಾಮಾನ್ಯವಾಗಿ ಜಿಲ್ಲೆಗಳಲ್ಲಿ ಕನಿಷ್ಠ 1.20 ಎಕರೆಯಿಂದ 5 ಎಕರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆಯನ್ನು ಹೊಂದಿರಲೇ ಬೇಕು.  ಈ ಯೋಜನೆಗೆ ಬೇಕಾಗಿರುವ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್ ಪ್ರತಿ
  • ಕ್ರಿಶ್ಚಿಯನ್ ಸಮುದಾಯದ ಪ್ರಮಾಣಪತ್ರ
  • ಆದಾಯ ಪ್ರಮಾಣಪತ್ರ
  • ಸಣ್ಣ/ಅತಿ ಸಣ್ಣ ರೈತ ಪ್ರಮಾಣಪತ್ರ
  • ಇತ್ತೀಚಿನ ಆರ್‍ಟಿಸಿ ಪ್ರತಿ
  • ಭೂ ಕಂದಾಯ ರಸೀದಿ
  • ಪಾಸ್‍ಪೋರ್ಟ್ ಗಾತ್ರದ ಫೋಟೋ
  • ಸ್ವಯಂ ಫೋಷಣಾ ಪತ್ರ
  • ಬ್ಯಾಂಕ್ ಪಾಸ್‍ಬುಕ್

ಈ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ:   ಆಯಾ ಜಿಲ್ಲೆಯ ಕೆಎಮ್‍ಡಿಸಿ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ನೀಡಬೇಕು ಅಥವಾ ತಹಶೀಲ್ದಾರ್ ಕಚೇರಿ/ ತಾಲೂಕು ಕ್ರಿಶ್ಚಿಯನ್ ಅಲ್ಪಸಂಖ್ಯಾತ ಅಭಿವೃದ್ಧಿ ಅಧಿಕಾರಿಗಳ ಮೂಲಕವೂ ಸಲ್ಲಿಸಬಹುದು. ಯಾವುದೇ ಆನ್‍ಲೈನ್ ವ್ಯವಸ್ಥೆಗಳಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

17 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

17 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

17 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

17 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

17 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago