Advertisement
MIRROR FOCUS

ಅಡಿಕೆ ಆಮದು ವಿರುದ್ಧ ದೇಶದಲ್ಲಿ ಬೆಳೆಗಾರರ ಹೋರಾಟ | ದೇಶದ ರೈತರ ಉಳಿಸೀತೇ ಆಡಳಿತ ?

Share

ಅಡಿಕೆ ಆಮದು ಕಾರಣದಿಂದಲೇ ಅಡಿಕೆ ಮಾರುಕಟ್ಟೆಯಲ್ಲಿ ಅಸ್ಥಿರತೆ ಕಂಡುಬಂದಿದೆ ಎನ್ನುವುದು ಈಗಾಗಲೇ ಎಲ್ಲೆಡೆಯೂ ಚರ್ಚೆಯಾಗುತ್ತಿದೆ. ಈ ನಡುವೆಯೇ ರೈತರು ಹೋರಾಟ ಆರಂಭಿಸಿದ್ದಾರೆ. ಅಡಿಕೆ ಬೆಳೆಯುವ ಕರ್ನಾಟಕದ ವಿವಿಧ ಕಡೆ ಬೆಳೆಗಾರರು ಜಾಗೃತರಾದರೆ ಅಸ್ಸಂ ಸಹಿತ ಈಶಾನ್ಯ ರಾಜ್ಯಗಳಲ್ಲೂ ಈಗ ಅಡಿಕೆ ಆಮದು ವಿರುದ್ಧ ಬೆಳೆಗಾರರು ಹಾಗೂ ಸ್ಥಳೀಯ ಶಾಸಕರುಗಳು ಎಚ್ಚೆತ್ತುಕೊಂಡು ಹೋರಾಟಕ್ಕೆ ಇಳಿದಿದ್ದಾರೆ.

Advertisement
Advertisement
Advertisement
Advertisement

ಅಡಿಕೆ ಆಮದು ಮಾಡುತ್ತಿರುವುದರಿಂದ ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಲೆ ತೀವ್ರ ಕುಸಿದು ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅಡಿಕೆ ಆಮದು ನಿಷೇಧಿಸುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲೆಯ ಎಲ್ಲ ರೈತ ಸಂಘಗಳ ಒಕ್ಕೂಟದ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು. ಟ್ರ್ಯಾಕ್ಟರ್‌ಗಳು ಹಾಗೂ ಇತರ ವಾಹನಗಳೊಂದಿಗೆ ಬೃಹತ್ ಪ್ರತಿಭಟನಾ ಜಾಥಾದೊಂದಿಗೆ ಹೋರಾಟ ನಡೆಯಿತು.

Advertisement

ದ.ಕ. ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಎಲೆಚುಕ್ಕಿ ರೋಗ, ಹಳದಿ ಎಲೆ ರೋಗ, ತೆಂಗಿನ ಬೆಲೆ ಕುಸಿತದಿಂದಾಗಿ ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿಯಲ್ಲಿದ್ದಾರೆ. ಇದೀಗ ಅಡಿಕೆ ಆಮದಿನಿಂದ ಬೆಲೆ ಕುಸಿತ ಉಂಟಾಗಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ ಎಂದು ಹೋರಾಟಗಾರರು ಹೇಳಿದ್ದಾರೆ.

ಇದೇ ವೇಳೆ ಈಶಾನ್ಯ ರಾಜ್ಯಗಳ ಮೂಲಕವೂ ಅವ್ಯಾಹತವಾಗಿ ಅಡಿಕೆ ಕಳ್ಳಸಾಗಾಣಿಕೆಯಾಗುತ್ತಿರುವುದು ಅಲ್ಲಿನ ಅಡಿಕೆ ಬೆಳೆಗಾರರಿಗೂ ಸಮಸ್ಯೆಯಾಗುತ್ತಿದೆ. ಇದಕ್ಕಾಗಿ ಅಸ್ಸಾಂ ಸಹಿತ ವಿವಿಧ ಕಡೆಗಳಲ್ಲಿ ಕೃಷಿಕರು ಹೋರಾಟ ಆರಂಭಿಸಿದ್ದಾರೆ. ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಾಟ ಮತ್ತು ಈ ಕಾರಣದಿಂದ ಅಲ್ಲಿನ ರೈತರ ಮೇಲೆ ಹಲ್ಲೆ ನಡೆಸುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ಹೋರಾಟ ಆರಂಭಗೊಂಡಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಅಭಿಯಾನ ಆರಂಭವಾಗಿದೆ. ಅಸ್ಸಾಂ  ವಿಧಾನಸಭೆ ಅಧಿವೇಶನದಲ್ಲಿ ವಿಷಯವನ್ನು ಪ್ರಸ್ತಾಪಿಸಿದ ಶಾಸಕ ಮುಕುಲ್ ತೀವ್ರವಾಗಿ ಖಂಡಿಸಿದ್ದಾರೆ.  ಇದೇ ರೀತಿ ಮುಂದುವರಿದರೆ  ರಾಜ್ಯದ ರೈತರು  ಸಚಿವಾಲಯದ ಮುಂದೆ ಅಡಿಕೆ ಸುರಿಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಅಕ್ರಮ ಕಳ್ಳಸಾಗಾಣಿಕೆಯ ಕಾರಣದಿಂದ ಅಸ್ಸಾಂನ ಗುಡ್ಡಗಾಡು ಪ್ರದೇಶವಾದ ಗಾರೋ ಹಿಲ್ಸ್ ಪ್ರದೇಶದ ಬಹುತೇಕ ಎಲ್ಲಾ ಮಾರುಕಟ್ಟೆಗಳಲ್ಲಿ ಒಂದು ಚೀಲ ಅಡಿಕೆಗೆ 6000 ರೂ ಇದ್ದ ಬೆಲೆಯು ಈಗ 3000 ರೂ.ಗೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಈ ನಡುವೆ ಅಕ್ರಮ ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ನಿಯೋಗವೊಂದು ಕೇಂದ್ರ ಸಚಿವರನ್ನು ಭೇಟಿಯಾಗಿ ಒತ್ತಾಯಿಸಿದೆ. ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು, ಅಡಿಕೆ ಬೆಳೆಗಾರರನ್ನು ನಿರ್ಲಕ್ಷ್ಯ ಮಾಡುವುದಿಲ್ಲ ಎಂದು ಕೇಂದ್ರ ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ಅವರು ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…

22 hours ago

‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ

ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…

22 hours ago

ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |

15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…

22 hours ago

ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ

ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…

22 hours ago

ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ

ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…

1 day ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…

1 day ago