Advertisement
ಕೃಷಿ

ಅಡಿಕೆ ಕಾರ್ಯಪಡೆಗೆ ಅನುದಾನ : ರಾಜ್ಯ ಸರಕಾರಕ್ಕೆ ಕ್ಯಾಂಪ್ಕೋ ಅಭಿನಂದನೆ

Share

ರಾಜ್ಯ ಸರಕಾರವು ಅಡಿಕೆ ಬೆಳೆಯ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಅಡಿಕೆ ಕಾರ್ಯಪಡೆ (ಅರೆಕಾ ಟಾಸ್ಕ್ ಫೋರ್ಸ್) ಯು ಅಡಿಕೆಯ ಭವಿಷ್ಯತ್ತಿಗಾಗಿ ಎಲ್ಲಾ ರೀತಿಯಲ್ಲೂ ಕಾರ್ಯಪ್ರವೃತ್ತವಾಗಿದ್ದು, ಅಡಿಕೆ ಮಾರುಕಟ್ಟೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ತೀರ್ಥಹಳ್ಳಿ ಶಾಸಕ  ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಪಡೆಗೆ ಇದೀಗ ರಾಜ್ಯಸರಕಾರವು ರೂ.10 ಕೋಟಿಗಳ ಅನುದಾನವನ್ನು ಘೋಷಿಸಿದ್ದು ಇದಕ್ಕಾಗಿ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಕ್ಯಾಂಪ್ಕೋ ಅಧ್ಯಕ್ಷ ಎಸ್‌ ಆರ್‌ ಸತೀಶ್ಚಂದ್ರ ಹೇಳಿದ್ದಾರೆ.

Advertisement

ಈ ಅನುದಾನದ ಮೂಲಕ  ಕಾರ್ಯಪಡೆಯ ಕೆಲಸ ಕಾರ್ಯಗಳಿಗೆ ಇನ್ನಷ್ಟು ವೇಗವನ್ನು ನೀಡಲಿದೆ. ಈ ಅನುದಾನವು ಅಡಿಕೆಯ ಬಗೆಗಿನ ಕಾನೂನಾತ್ಮಕ ವ್ಯವಹಾರಗಳಿಗಾಗಿ ಮತ್ತು ಅಡಿಕೆಯ ಮೌಲ್ಯವರ್ಧನೆ ಸಂಬಂಧ ಸಂಶೋಧನೆಗಳನ್ನು ನಡೆಸುವುದಕ್ಕಾಗಿ ವಿನಿಯೋಗವಾಗಲಿದೆ. ಅಡಿಕೆ ಕೃಷಿಯ ಬಗ್ಗೆ ಒಲವಿರಿಸಿಕೊಂಡು ಮುತುವರ್ಜಿ ವಹಿಸಿ ಕಾರ್ಯಪಡೆಗೆ ಅನುದಾನವನ್ನೊದಗಿಸಿಕೊಟ್ಟ ಮಾನ್ಯ ಮುಖ್ಯಮಂತ್ರಿಗಳ ಮತ್ತು ರಾಜ್ಯ ಸರಕಾರದ ನಡೆಯು ಪ್ರಶಂಸನೀಯ. ಇದಕ್ಕಾಗಿ ಅಡಿಕೆ ಕೃಷಿಕರ ಪರವಾಗಿ ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರನ್ನು ಕ್ಯಾಂಪ್ಕೋ ಅಭಿನಂದಿಸುತ್ತದೆ. ಅಲ್ಲದೆ ಈ ಅನುದಾನಕ್ಕಾಗಿ ಶ್ರಮಿಸಿದ ದಕ್ಷಿಣ ಕನ್ನಡದ  ಸಂಸದರಾದ  ನಳಿನ್ ಕುಮಾರ್ ಕಟೀಲ್ ಮತ್ತು ಅಡಿಕೆ ಬೆಳೆಯುವ ಪ್ರದೇಶದ ಎಲ್ಲ ಶಾಸಕರುಗಳಿಗೆ ಕೃತಜ್ಞತೆಗಳನ್ನು ಕ್ಯಾಂಪ್ಕೋ ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್‌ ಆರ್‌ ಸತೀಶ್ಚಂದ್ರ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

7 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

13 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

24 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

24 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago