ರಾಜ್ಯ ಸರಕಾರವು ಅಡಿಕೆ ಬೆಳೆಯ ಸರ್ವತೋಮುಖ ಅಭಿವೃದ್ಧಿಗಾಗಿ ರೂಪಿಸಿರುವ ಅಡಿಕೆ ಕಾರ್ಯಪಡೆ (ಅರೆಕಾ ಟಾಸ್ಕ್ ಫೋರ್ಸ್) ಯು ಅಡಿಕೆಯ ಭವಿಷ್ಯತ್ತಿಗಾಗಿ ಎಲ್ಲಾ ರೀತಿಯಲ್ಲೂ ಕಾರ್ಯಪ್ರವೃತ್ತವಾಗಿದ್ದು, ಅಡಿಕೆ ಮಾರುಕಟ್ಟೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಪಡೆಗೆ ಇದೀಗ ರಾಜ್ಯಸರಕಾರವು ರೂ.10 ಕೋಟಿಗಳ ಅನುದಾನವನ್ನು ಘೋಷಿಸಿದ್ದು ಇದಕ್ಕಾಗಿ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಹೇಳಿದ್ದಾರೆ.
ಈ ಅನುದಾನದ ಮೂಲಕ ಕಾರ್ಯಪಡೆಯ ಕೆಲಸ ಕಾರ್ಯಗಳಿಗೆ ಇನ್ನಷ್ಟು ವೇಗವನ್ನು ನೀಡಲಿದೆ. ಈ ಅನುದಾನವು ಅಡಿಕೆಯ ಬಗೆಗಿನ ಕಾನೂನಾತ್ಮಕ ವ್ಯವಹಾರಗಳಿಗಾಗಿ ಮತ್ತು ಅಡಿಕೆಯ ಮೌಲ್ಯವರ್ಧನೆ ಸಂಬಂಧ ಸಂಶೋಧನೆಗಳನ್ನು ನಡೆಸುವುದಕ್ಕಾಗಿ ವಿನಿಯೋಗವಾಗಲಿದೆ. ಅಡಿಕೆ ಕೃಷಿಯ ಬಗ್ಗೆ ಒಲವಿರಿಸಿಕೊಂಡು ಮುತುವರ್ಜಿ ವಹಿಸಿ ಕಾರ್ಯಪಡೆಗೆ ಅನುದಾನವನ್ನೊದಗಿಸಿಕೊಟ್ಟ ಮಾನ್ಯ ಮುಖ್ಯಮಂತ್ರಿಗಳ ಮತ್ತು ರಾಜ್ಯ ಸರಕಾರದ ನಡೆಯು ಪ್ರಶಂಸನೀಯ. ಇದಕ್ಕಾಗಿ ಅಡಿಕೆ ಕೃಷಿಕರ ಪರವಾಗಿ ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕ್ಯಾಂಪ್ಕೋ ಅಭಿನಂದಿಸುತ್ತದೆ. ಅಲ್ಲದೆ ಈ ಅನುದಾನಕ್ಕಾಗಿ ಶ್ರಮಿಸಿದ ದಕ್ಷಿಣ ಕನ್ನಡದ ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಅಡಿಕೆ ಬೆಳೆಯುವ ಪ್ರದೇಶದ ಎಲ್ಲ ಶಾಸಕರುಗಳಿಗೆ ಕೃತಜ್ಞತೆಗಳನ್ನು ಕ್ಯಾಂಪ್ಕೋ ಸಲ್ಲಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…