ಹಳದಿರೋಗ ಪರಿಹಾರಕ್ಕಾಗಿ ರಾಜ್ಯ ಬಜೆಟ್ ನಲ್ಲಿ ನಿಧಿ ಹಂಚಿಕೆ – ಕ್ಯಾಂಪ್ಕೋ ಅಭಿನಂದನೆ

March 8, 2021
11:31 PM

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ  ಅಡಿಕೆಗೆ ಬಾಧಿಸಿರುವ ಹಳದಿರೋಗದ ಬಗ್ಗೆ ಸಂಶೋಧನೆಗಳನ್ನು ನಡೆಸಿ ಪರಿಹಾರವನ್ನು ಕಂಡುಕೊಳ್ಳುವುದರ ಜೊತೆಗೆ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ರೂ.25 ಕೋಟಿಗಳ ನಿಧಿ ಹಂಚಿಕೆಯನ್ನು ಘೋಷಿಸಿದ್ದಾರೆ. ರಾಜ್ಯಸರಕಾರದ ಈ ನಡೆಯನ್ನು ಪ್ರಶಂಸಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

ಇತ್ತೀಚೆಗೆ ಹಳದಿರೋಗದ ಪರಿಹಾರಕ್ಕಾಗಿ ಮತ್ತು ನೊಂದಿರುವ ರೈತರು ಹೊಸದಾಗಿ ಕೃಷಿಯಲ್ಲಿ ತೊಡಗಿಸಿಕೊಳ್ಳುವಲ್ಲಿ ನೆರವಾಗುವ ಸಲುವಾಗಿ ಪ್ಯಾಕೇಜ್ ಘೋಷಿಸುವಂತೆ ತಾವು ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿಗಳು ಇದೀಗ ನುಡಿದಂತೆ ನಡೆದು, ರಾಜ್ಯ ಮುಂಗಡ ಪತ್ರದಲ್ಲಿ ಹಳದಿರೋಗ ಪರಿಹಾರಕ್ಕಾಗಿ ಪ್ಯಾಕೇಜ್‌ ಘೋಷಣೆ ಮಾಡಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ಘೋಷಿತ ಅನುದಾನವು ಹಳದಿರೋಗದ ಪರಿಹಾರಕ್ಕಾಗಿ ನಡೆಸಲಾಗುವ ವೈಜ್ಞಾನಿಕ ಸಂಶೋಧನೆಗಳಿಗಾಗಿ ಮತ್ತು ರೋಗಬಾಧೆಯಿಂದ ತಮ್ಮಅಡಿಕೆ ತೋಟಗಳನ್ನು ಕಳೆದುಕೊಂಡಿರುವ ರೈತರು ಹೊಸದಾಗಿ ಕೃಷಿಯನ್ನುಆರಂಭಿಸುವಲ್ಲಿ ನೆರವಾಗಲಿದೆ. ಈಗಾಗಲೇ ದ.ಕ.ಜಿಲ್ಲೆಯ ಸುಳ್ಯ, ಕೊಡಗು ಜಿಲ್ಲೆಯ ಮಡಿಕೇರಿ, ಶಿವಮೊಗ್ಗ ಜಿಲ್ಲೆಯ ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಹಳದಿರೋಗವು ಅಡಿಕೆ ತೋಟಗಳಲ್ಲಿ ವ್ಯಾಪಿಸಿದ್ದು, ಆದಾಯ ನಷ್ಟ ಅನುಭವಿಸಿರುವ ರೈತರು ನೋವಿನಿಂದ ಹೊರಬಂದು ತಮ್ಮತೋಟಗಳಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಸುವತ್ತ ಗಮನಹರಿಸಬೇಕಾಗಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror