Advertisement
ಸುದ್ದಿಗಳು

ಹಳದಿರೋಗ ಪರಿಹಾರಕ್ಕಾಗಿ ರಾಜ್ಯ ಬಜೆಟ್ ನಲ್ಲಿ ನಿಧಿ ಹಂಚಿಕೆ – ಕ್ಯಾಂಪ್ಕೋ ಅಭಿನಂದನೆ

Share

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ  ಅಡಿಕೆಗೆ ಬಾಧಿಸಿರುವ ಹಳದಿರೋಗದ ಬಗ್ಗೆ ಸಂಶೋಧನೆಗಳನ್ನು ನಡೆಸಿ ಪರಿಹಾರವನ್ನು ಕಂಡುಕೊಳ್ಳುವುದರ ಜೊತೆಗೆ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ರೂ.25 ಕೋಟಿಗಳ ನಿಧಿ ಹಂಚಿಕೆಯನ್ನು ಘೋಷಿಸಿದ್ದಾರೆ. ರಾಜ್ಯಸರಕಾರದ ಈ ನಡೆಯನ್ನು ಪ್ರಶಂಸಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

Advertisement
Advertisement

ಇತ್ತೀಚೆಗೆ ಹಳದಿರೋಗದ ಪರಿಹಾರಕ್ಕಾಗಿ ಮತ್ತು ನೊಂದಿರುವ ರೈತರು ಹೊಸದಾಗಿ ಕೃಷಿಯಲ್ಲಿ ತೊಡಗಿಸಿಕೊಳ್ಳುವಲ್ಲಿ ನೆರವಾಗುವ ಸಲುವಾಗಿ ಪ್ಯಾಕೇಜ್ ಘೋಷಿಸುವಂತೆ ತಾವು ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿಗಳು ಇದೀಗ ನುಡಿದಂತೆ ನಡೆದು, ರಾಜ್ಯ ಮುಂಗಡ ಪತ್ರದಲ್ಲಿ ಹಳದಿರೋಗ ಪರಿಹಾರಕ್ಕಾಗಿ ಪ್ಯಾಕೇಜ್‌ ಘೋಷಣೆ ಮಾಡಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ಘೋಷಿತ ಅನುದಾನವು ಹಳದಿರೋಗದ ಪರಿಹಾರಕ್ಕಾಗಿ ನಡೆಸಲಾಗುವ ವೈಜ್ಞಾನಿಕ ಸಂಶೋಧನೆಗಳಿಗಾಗಿ ಮತ್ತು ರೋಗಬಾಧೆಯಿಂದ ತಮ್ಮಅಡಿಕೆ ತೋಟಗಳನ್ನು ಕಳೆದುಕೊಂಡಿರುವ ರೈತರು ಹೊಸದಾಗಿ ಕೃಷಿಯನ್ನುಆರಂಭಿಸುವಲ್ಲಿ ನೆರವಾಗಲಿದೆ. ಈಗಾಗಲೇ ದ.ಕ.ಜಿಲ್ಲೆಯ ಸುಳ್ಯ, ಕೊಡಗು ಜಿಲ್ಲೆಯ ಮಡಿಕೇರಿ, ಶಿವಮೊಗ್ಗ ಜಿಲ್ಲೆಯ ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಹಳದಿರೋಗವು ಅಡಿಕೆ ತೋಟಗಳಲ್ಲಿ ವ್ಯಾಪಿಸಿದ್ದು, ಆದಾಯ ನಷ್ಟ ಅನುಭವಿಸಿರುವ ರೈತರು ನೋವಿನಿಂದ ಹೊರಬಂದು ತಮ್ಮತೋಟಗಳಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಸುವತ್ತ ಗಮನಹರಿಸಬೇಕಾಗಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

3 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

3 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

3 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

4 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

4 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

14 hours ago