ಸುದ್ದಿಗಳು

ಹಳದಿರೋಗ ಪರಿಹಾರಕ್ಕಾಗಿ ರಾಜ್ಯ ಬಜೆಟ್ ನಲ್ಲಿ ನಿಧಿ ಹಂಚಿಕೆ – ಕ್ಯಾಂಪ್ಕೋ ಅಭಿನಂದನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ  ಅಡಿಕೆಗೆ ಬಾಧಿಸಿರುವ ಹಳದಿರೋಗದ ಬಗ್ಗೆ ಸಂಶೋಧನೆಗಳನ್ನು ನಡೆಸಿ ಪರಿಹಾರವನ್ನು ಕಂಡುಕೊಳ್ಳುವುದರ ಜೊತೆಗೆ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ರೂ.25 ಕೋಟಿಗಳ ನಿಧಿ ಹಂಚಿಕೆಯನ್ನು ಘೋಷಿಸಿದ್ದಾರೆ. ರಾಜ್ಯಸರಕಾರದ ಈ ನಡೆಯನ್ನು ಪ್ರಶಂಸಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

Advertisement
Advertisement

ಇತ್ತೀಚೆಗೆ ಹಳದಿರೋಗದ ಪರಿಹಾರಕ್ಕಾಗಿ ಮತ್ತು ನೊಂದಿರುವ ರೈತರು ಹೊಸದಾಗಿ ಕೃಷಿಯಲ್ಲಿ ತೊಡಗಿಸಿಕೊಳ್ಳುವಲ್ಲಿ ನೆರವಾಗುವ ಸಲುವಾಗಿ ಪ್ಯಾಕೇಜ್ ಘೋಷಿಸುವಂತೆ ತಾವು ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿಗಳು ಇದೀಗ ನುಡಿದಂತೆ ನಡೆದು, ರಾಜ್ಯ ಮುಂಗಡ ಪತ್ರದಲ್ಲಿ ಹಳದಿರೋಗ ಪರಿಹಾರಕ್ಕಾಗಿ ಪ್ಯಾಕೇಜ್‌ ಘೋಷಣೆ ಮಾಡಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ಘೋಷಿತ ಅನುದಾನವು ಹಳದಿರೋಗದ ಪರಿಹಾರಕ್ಕಾಗಿ ನಡೆಸಲಾಗುವ ವೈಜ್ಞಾನಿಕ ಸಂಶೋಧನೆಗಳಿಗಾಗಿ ಮತ್ತು ರೋಗಬಾಧೆಯಿಂದ ತಮ್ಮಅಡಿಕೆ ತೋಟಗಳನ್ನು ಕಳೆದುಕೊಂಡಿರುವ ರೈತರು ಹೊಸದಾಗಿ ಕೃಷಿಯನ್ನುಆರಂಭಿಸುವಲ್ಲಿ ನೆರವಾಗಲಿದೆ. ಈಗಾಗಲೇ ದ.ಕ.ಜಿಲ್ಲೆಯ ಸುಳ್ಯ, ಕೊಡಗು ಜಿಲ್ಲೆಯ ಮಡಿಕೇರಿ, ಶಿವಮೊಗ್ಗ ಜಿಲ್ಲೆಯ ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಹಳದಿರೋಗವು ಅಡಿಕೆ ತೋಟಗಳಲ್ಲಿ ವ್ಯಾಪಿಸಿದ್ದು, ಆದಾಯ ನಷ್ಟ ಅನುಭವಿಸಿರುವ ರೈತರು ನೋವಿನಿಂದ ಹೊರಬಂದು ತಮ್ಮತೋಟಗಳಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಸುವತ್ತ ಗಮನಹರಿಸಬೇಕಾಗಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

18 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

18 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

21 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

21 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

21 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago