Advertisement
ಸುದ್ದಿಗಳು

ಹಳದಿರೋಗ ಪರಿಹಾರಕ್ಕಾಗಿ ರಾಜ್ಯ ಬಜೆಟ್ ನಲ್ಲಿ ನಿಧಿ ಹಂಚಿಕೆ – ಕ್ಯಾಂಪ್ಕೋ ಅಭಿನಂದನೆ

Share

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ  ಅಡಿಕೆಗೆ ಬಾಧಿಸಿರುವ ಹಳದಿರೋಗದ ಬಗ್ಗೆ ಸಂಶೋಧನೆಗಳನ್ನು ನಡೆಸಿ ಪರಿಹಾರವನ್ನು ಕಂಡುಕೊಳ್ಳುವುದರ ಜೊತೆಗೆ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ರೂ.25 ಕೋಟಿಗಳ ನಿಧಿ ಹಂಚಿಕೆಯನ್ನು ಘೋಷಿಸಿದ್ದಾರೆ. ರಾಜ್ಯಸರಕಾರದ ಈ ನಡೆಯನ್ನು ಪ್ರಶಂಸಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

Advertisement
Advertisement

ಇತ್ತೀಚೆಗೆ ಹಳದಿರೋಗದ ಪರಿಹಾರಕ್ಕಾಗಿ ಮತ್ತು ನೊಂದಿರುವ ರೈತರು ಹೊಸದಾಗಿ ಕೃಷಿಯಲ್ಲಿ ತೊಡಗಿಸಿಕೊಳ್ಳುವಲ್ಲಿ ನೆರವಾಗುವ ಸಲುವಾಗಿ ಪ್ಯಾಕೇಜ್ ಘೋಷಿಸುವಂತೆ ತಾವು ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿಗಳು ಇದೀಗ ನುಡಿದಂತೆ ನಡೆದು, ರಾಜ್ಯ ಮುಂಗಡ ಪತ್ರದಲ್ಲಿ ಹಳದಿರೋಗ ಪರಿಹಾರಕ್ಕಾಗಿ ಪ್ಯಾಕೇಜ್‌ ಘೋಷಣೆ ಮಾಡಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ಘೋಷಿತ ಅನುದಾನವು ಹಳದಿರೋಗದ ಪರಿಹಾರಕ್ಕಾಗಿ ನಡೆಸಲಾಗುವ ವೈಜ್ಞಾನಿಕ ಸಂಶೋಧನೆಗಳಿಗಾಗಿ ಮತ್ತು ರೋಗಬಾಧೆಯಿಂದ ತಮ್ಮಅಡಿಕೆ ತೋಟಗಳನ್ನು ಕಳೆದುಕೊಂಡಿರುವ ರೈತರು ಹೊಸದಾಗಿ ಕೃಷಿಯನ್ನುಆರಂಭಿಸುವಲ್ಲಿ ನೆರವಾಗಲಿದೆ. ಈಗಾಗಲೇ ದ.ಕ.ಜಿಲ್ಲೆಯ ಸುಳ್ಯ, ಕೊಡಗು ಜಿಲ್ಲೆಯ ಮಡಿಕೇರಿ, ಶಿವಮೊಗ್ಗ ಜಿಲ್ಲೆಯ ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಹಳದಿರೋಗವು ಅಡಿಕೆ ತೋಟಗಳಲ್ಲಿ ವ್ಯಾಪಿಸಿದ್ದು, ಆದಾಯ ನಷ್ಟ ಅನುಭವಿಸಿರುವ ರೈತರು ನೋವಿನಿಂದ ಹೊರಬಂದು ತಮ್ಮತೋಟಗಳಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಸುವತ್ತ ಗಮನಹರಿಸಬೇಕಾಗಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

2 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

3 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

8 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

11 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

12 hours ago