ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಅಡಿಕೆಗೆ ಬಾಧಿಸಿರುವ ಹಳದಿರೋಗದ ಬಗ್ಗೆ ಸಂಶೋಧನೆಗಳನ್ನು ನಡೆಸಿ ಪರಿಹಾರವನ್ನು ಕಂಡುಕೊಳ್ಳುವುದರ ಜೊತೆಗೆ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ರೂ.25 ಕೋಟಿಗಳ ನಿಧಿ ಹಂಚಿಕೆಯನ್ನು ಘೋಷಿಸಿದ್ದಾರೆ. ರಾಜ್ಯಸರಕಾರದ ಈ ನಡೆಯನ್ನು ಪ್ರಶಂಸಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್ ಕುಮಾರ್ ಕೊಡ್ಗಿ ಅವರು ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.
ಇತ್ತೀಚೆಗೆ ಹಳದಿರೋಗದ ಪರಿಹಾರಕ್ಕಾಗಿ ಮತ್ತು ನೊಂದಿರುವ ರೈತರು ಹೊಸದಾಗಿ ಕೃಷಿಯಲ್ಲಿ ತೊಡಗಿಸಿಕೊಳ್ಳುವಲ್ಲಿ ನೆರವಾಗುವ ಸಲುವಾಗಿ ಪ್ಯಾಕೇಜ್ ಘೋಷಿಸುವಂತೆ ತಾವು ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿಗಳು ಇದೀಗ ನುಡಿದಂತೆ ನಡೆದು, ರಾಜ್ಯ ಮುಂಗಡ ಪತ್ರದಲ್ಲಿ ಹಳದಿರೋಗ ಪರಿಹಾರಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಘೋಷಿತ ಅನುದಾನವು ಹಳದಿರೋಗದ ಪರಿಹಾರಕ್ಕಾಗಿ ನಡೆಸಲಾಗುವ ವೈಜ್ಞಾನಿಕ ಸಂಶೋಧನೆಗಳಿಗಾಗಿ ಮತ್ತು ರೋಗಬಾಧೆಯಿಂದ ತಮ್ಮಅಡಿಕೆ ತೋಟಗಳನ್ನು ಕಳೆದುಕೊಂಡಿರುವ ರೈತರು ಹೊಸದಾಗಿ ಕೃಷಿಯನ್ನುಆರಂಭಿಸುವಲ್ಲಿ ನೆರವಾಗಲಿದೆ. ಈಗಾಗಲೇ ದ.ಕ.ಜಿಲ್ಲೆಯ ಸುಳ್ಯ, ಕೊಡಗು ಜಿಲ್ಲೆಯ ಮಡಿಕೇರಿ, ಶಿವಮೊಗ್ಗ ಜಿಲ್ಲೆಯ ಶೃಂಗೇರಿ, ಕೊಪ್ಪ ತಾಲೂಕುಗಳಲ್ಲಿ ಹಳದಿರೋಗವು ಅಡಿಕೆ ತೋಟಗಳಲ್ಲಿ ವ್ಯಾಪಿಸಿದ್ದು, ಆದಾಯ ನಷ್ಟ ಅನುಭವಿಸಿರುವ ರೈತರು ನೋವಿನಿಂದ ಹೊರಬಂದು ತಮ್ಮತೋಟಗಳಲ್ಲಿ ಪರ್ಯಾಯ ಬೆಳೆಗಳನ್ನು ಬೆಳೆಸುವತ್ತ ಗಮನಹರಿಸಬೇಕಾಗಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…