Advertisement
ಸುದ್ದಿಗಳು

ಅ.30 : ಕ್ಯಾಂಪ್ಕೋ ಚಾಕೋಲೇಟ್‌ ನೂತನ ಉತ್ಪನ್ನ ಬಿಡುಗಡೆ

Share

ಕ್ಯಾಂಪ್ಕೋ ವತಿಯಿಂದ ಮತ್ತೊಂದು ಚಾಕೋಲೇಟ್‌ ಉತ್ಪನ್ನ ಹಾಗೂ ಚಾಕೋಲೇಟ್‌ ಪೇಯ ವಿನ್ನರ್‌ ನ ಇನ್ನೊಂದು ಉತ್ಪನ್ನ ಅ.30  ರಂದು ಪುತ್ತೂರಿನಲ್ಲಿ  ಬಿಡುಗಡೆಯಾಗಲಿದೆ. ದಿ ಡೈರಿ ಡ್ರೀಮ್ &ನಟ್ (The Dairy Dream Fruit & Nut) ಹಾಗೂ ವಿನ್ನರ್‌ ಪೇಯ ವಿನ್ನರ್‌ ವಿದ್‌ ಜಾಗ್ರೀ (Winner-with Jaggery) ಬಿಡುಗಡೆಯಾಗುವ ನೂತನ ಉತ್ಪನ್ನ.

Advertisement

ಪುತ್ತೂರಿನ  ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿ ಆವರಣದಲ್ಲಿ  ನಡೆಯುವ ಈ ಬಿಡುಗಡೆ ಸಮಾರಂಭದಲ್ಲಿ  ವಿವೇಕಾನಂದ  ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಕೆ.ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸುವರು.  ಶಾಸಕ ಸಂಜೀವ ಮಟಂದೂರು ಅವರು ಭಾಗವಹಿಸುವರು.

ದೇಸೀ ಚಾಕೋಲೇಟ್‌, ರೈತರ ಬೆನ್ನೆಲುಬಾದ ಕ್ಯಾಂಪ್ಕೋ ನೂತನವಾಗಿ ಬಿಡುಗಡೆ ಮಾಡುವ ಈ ಚಾಕೋಲೇಟ್‌ ಉತ್ಪನ್ನವು ಶುದ್ಧ ಹಾಲಿನ ಪುಡಿ, ಕೋಕೋ, ಬಾದಾಮಿ ಮತ್ತುಒಣದ್ರಾಕ್ಷಿಗಳಮಿಶ್ರಣದೊಂದಿಗೆ ತಯಾರಿಸಲಾಗಿದೆ. ಈ ಉತ್ಪನ್ನವು 40 ಗ್ರಾಂ ಸ್ಲಾಬ್‌ ನಲ್ಲಿ  40  ರೂಪಾಯಿ ಗರಿಷ್ಟ ಮಾರಾಟ ಬೆಲೆಗೆ ಲಭ್ಯವಿದೆ.

ಚಾಕೊಲೇಟ್ ಹಾಗೂ ಬೆಲ್ಲದೊಂದಿಗೆ ಕೂಡಿದ ವಿಶೇಷ ಪೇಯ ಮಿಶ್ರಣ ವಿನ್ನರ್‌ ವಿದ್‌ ಜಾಗ್ರಿ  ಉತ್ಪನ್ನವು  ಬೆಲ್ಲದ ನೈಸರ್ಗಿಕ ಪೋಷಕಾಂಶಗಳೊಂದಿಗೆ ಸಮೃದ್ಧವಾಗಿದೆ. ಈ ಉತ್ಪನ್ನವು, ಸರ್ವಋತುಗಳಿಗೆ ಹಾಗೂ ಎಲ್ಲಾ ವಯೋಮಾನದವರಿಗೆ ಬಿಸಿ ಅಥವಾ ತಂಪುರೂಪದಲ್ಲಿ ಸೇವಿಸಬಹುದು. ಇದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದನ್ನು 300 ಗ್ರಾಂ ಪ್ಯಾಕ್ ಗೆ  ರೂ.180 ನಲ್ಲಿ ಪರಿಚಯಿಸಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

7 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago