Advertisement
ಸುದ್ದಿಗಳು

ಅ.30 : ಕ್ಯಾಂಪ್ಕೋ ಚಾಕೋಲೇಟ್‌ ನೂತನ ಉತ್ಪನ್ನ ಬಿಡುಗಡೆ

Share

ಕ್ಯಾಂಪ್ಕೋ ವತಿಯಿಂದ ಮತ್ತೊಂದು ಚಾಕೋಲೇಟ್‌ ಉತ್ಪನ್ನ ಹಾಗೂ ಚಾಕೋಲೇಟ್‌ ಪೇಯ ವಿನ್ನರ್‌ ನ ಇನ್ನೊಂದು ಉತ್ಪನ್ನ ಅ.30  ರಂದು ಪುತ್ತೂರಿನಲ್ಲಿ  ಬಿಡುಗಡೆಯಾಗಲಿದೆ. ದಿ ಡೈರಿ ಡ್ರೀಮ್ &ನಟ್ (The Dairy Dream Fruit & Nut) ಹಾಗೂ ವಿನ್ನರ್‌ ಪೇಯ ವಿನ್ನರ್‌ ವಿದ್‌ ಜಾಗ್ರೀ (Winner-with Jaggery) ಬಿಡುಗಡೆಯಾಗುವ ನೂತನ ಉತ್ಪನ್ನ.

ಪುತ್ತೂರಿನ  ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿ ಆವರಣದಲ್ಲಿ  ನಡೆಯುವ ಈ ಬಿಡುಗಡೆ ಸಮಾರಂಭದಲ್ಲಿ  ವಿವೇಕಾನಂದ  ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಕೆ.ಪ್ರಭಾಕರ ಭಟ್ ಕಲ್ಲಡ್ಕ ಅವರು ಬಿಡುಗಡೆಗೊಳಿಸುವರು.  ಶಾಸಕ ಸಂಜೀವ ಮಟಂದೂರು ಅವರು ಭಾಗವಹಿಸುವರು.

ದೇಸೀ ಚಾಕೋಲೇಟ್‌, ರೈತರ ಬೆನ್ನೆಲುಬಾದ ಕ್ಯಾಂಪ್ಕೋ ನೂತನವಾಗಿ ಬಿಡುಗಡೆ ಮಾಡುವ ಈ ಚಾಕೋಲೇಟ್‌ ಉತ್ಪನ್ನವು ಶುದ್ಧ ಹಾಲಿನ ಪುಡಿ, ಕೋಕೋ, ಬಾದಾಮಿ ಮತ್ತುಒಣದ್ರಾಕ್ಷಿಗಳಮಿಶ್ರಣದೊಂದಿಗೆ ತಯಾರಿಸಲಾಗಿದೆ. ಈ ಉತ್ಪನ್ನವು 40 ಗ್ರಾಂ ಸ್ಲಾಬ್‌ ನಲ್ಲಿ  40  ರೂಪಾಯಿ ಗರಿಷ್ಟ ಮಾರಾಟ ಬೆಲೆಗೆ ಲಭ್ಯವಿದೆ.

ಚಾಕೊಲೇಟ್ ಹಾಗೂ ಬೆಲ್ಲದೊಂದಿಗೆ ಕೂಡಿದ ವಿಶೇಷ ಪೇಯ ಮಿಶ್ರಣ ವಿನ್ನರ್‌ ವಿದ್‌ ಜಾಗ್ರಿ  ಉತ್ಪನ್ನವು  ಬೆಲ್ಲದ ನೈಸರ್ಗಿಕ ಪೋಷಕಾಂಶಗಳೊಂದಿಗೆ ಸಮೃದ್ಧವಾಗಿದೆ. ಈ ಉತ್ಪನ್ನವು, ಸರ್ವಋತುಗಳಿಗೆ ಹಾಗೂ ಎಲ್ಲಾ ವಯೋಮಾನದವರಿಗೆ ಬಿಸಿ ಅಥವಾ ತಂಪುರೂಪದಲ್ಲಿ ಸೇವಿಸಬಹುದು. ಇದು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದನ್ನು 300 ಗ್ರಾಂ ಪ್ಯಾಕ್ ಗೆ  ರೂ.180 ನಲ್ಲಿ ಪರಿಚಯಿಸಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

14 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

22 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago