ಲಕ್ಷ್ಮಣ ರಾವ್ ಇನಾಮದಾರ್ ಪ್ರಶಸ್ತಿಗೆ ಕ್ಯಾಂಪ್ಕೋ ಅವಿರೋಧವಾಗಿ ನಾಮನಿರ್ದೇಶನಗೊಂಡಿದೆ. ತನ್ನ ಸದಸ್ಯರು ಮತ್ತು ಪ್ರದೇಶಕ್ಕೆ ಅದ್ಭುತವಾದ ಸೇವೆಗಳಲ್ಲಿ ತೊಡಗಿರುವ ಪ್ರಖ್ಯಾತ ಸಹಕಾರಿ ಸಂಘಕ್ಕೆ ನೀಡುವ ಪ್ರಶಸ್ತಿ ಇದು. ರೈತರ ಆದಾಯವನ್ನು ದ್ವಿಗುಣಗೊಳಿಸುವ ಮತ್ತು ವಿವಿಧ ಕೃಷಿಉತ್ಪನ್ನಗಳ ಸಂಸ್ಕರಣೆಗೆ ಉತ್ತೇಜನ ನೀಡುವ ರಾಷ್ಟ್ರೀಯ ನೀತಿಯ ಹಿನ್ನೆಲೆಯಲ್ಲಿ, ಸಹಕಾರ ಭಾರತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯು ರಚಿಸಿರುವ ಸಮಿತಿಯು ಈ ವರ್ಷ ಸರ್ವಾನುಮತದಿಂದ ಕ್ಯಾಂಪ್ಕೋಗೆ ಅದರ ಗಮನಾರ್ಹ ಸೇವೆಗಳಿಗಾಗಿ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸು ಮಾಡಿದೆ.
ಕ್ಯಾಂಪ್ಕೋ ವೃತ್ತಿಪರವಾಗಿ ಮತ್ತು ಸಹಕಾರ ತತ್ವಗಳ ಮೇಲೆ ಕಾರ್ಯನಿರ್ವಹಿಸುತ್ತಿರುವುದರೊಂದಿಗೆ, ಗ್ರಾಮೀಣ ಸಮೂದಾಯ, ವಿಶೇಷವಾಗಿ ಅಡಿಕೆ, ಕೊಕ್ಕೋ ಮತ್ತು ರಬ್ಬರ್ ಕೃಷಿಯಲ್ಲಿ ತೊಡಗಿರುವ ರೈತರಿಗೆ ಗಮನಾರ್ಹ ಸೇವೆಗಳನ್ನು ನೀಡುತ್ತಿದೆ ಹಾಗೂ ವಿಶ್ವದರ್ಜೆಯ ವಿವಿಧ ಚಾಕಲೇಟ್ ಗಳನ್ನು ತಯಾರಿಸಿ ರಫ್ತುಮಾಡುತ್ತದೆ.
2021 ರ ಡಿಸೆಂಬರ್ 17 ರಿಂದ 19 ರವರೆಗೆ ಲಕ್ನೋದಲ್ಲಿ ನಡೆಯಲಿರುವ ಸಹಕಾರ ಭಾರತಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಗೌರವಾನ್ವಿತ ಒಕ್ಕೂಟದ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ನಡೆಯಲಿರುವ ಸಹಕಾರ ಭಾರತಿಯ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾಜಿ ಸರಕಾರ್ಯವಾಹ ಭೈಯಾಜಿ ಜೋಶಿ ಅವರು ಕ್ಯಾಂಪ್ಕೊಗೆ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…